ಗದಗ, 14 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಸರ್ಕಾರ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ, ಜಿಲ್ಲಾಡಳಿತ ಗದಗ, ಗದಗ ಬೆಟಗೇರಿ ನಗರಸಭೆ ಇವರುಗಳ ಸಹಯೋಗದಲ್ಲಿ ಗದಗ ಬೆಟಗೇರಿ ನಗರದ ಹಳೇ ಬಸ್ನಿಲ್ದಾಣದ ಆವರಣದಲ್ಲಿ ನಿರ್ಮಿಸಲಾದ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಸಮಾರಂಭವು ಅಗಸ್ಟ 15 ರಂದು ಮಧ್ಯಾಹ್ನ 12 ಗಂಟೆಗೆ ನಗರದ ಗಾನಯೋಗಿ ಪಂಡಿತ ಪುಟ್ಟರಾಜ ಗವಾಯಿ ಬಸ್ ನಿಲ್ದಾಣ ಹಳೇ ಬಸ್ ನಿಲ್ದಾಣದಲ್ಲಿ ನಲ್ಲಿ ಜರುಗಲಿದೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಮ್ ಖಾನ್ , ನಗರಾಭಿವೃದ್ಧಿ ಸಚಿವರಾದ ಸುರೇಶ ಬಿ.ಎಸ್. ಅವರುಗಳು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು.
ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ.ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ, ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್ , ಕರ್ನಾಟಕ ಖನಿಜ ಅಬಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ.ಎಸ್.ಪಾಟೀಲ, ಸಂಸದರಾದ ಪಿ.ಸಿ.ಗದ್ದಿಗೌಡರ, ವಿಧಾನ ಪರಿಷತ್ ಶಾಸಕರಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ್, ನರಗುಂದ ಶಾಸಕರಾದ ಸಿ.ಸಿ.ಪಾಟೀಲ, ಶಿರಹಟ್ಟಿ ಶಾಸಕರಾದ ಡಾ.ಚಂದ್ರು ಲಮಾಣಿ, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಸಿ.ಎನ್.ಶ್ರೀಧರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಬಿ.ಅಸೂಟಿ, ತಾಲೂಕಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಅಶೋಕ ಮಂದಾಲಿ ಆಗಮಿಸುವರು.
ವಿಶೇಷ ಆಹ್ವಾನಿತರಾಗಿ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಶ್ರೀಮತಿ ದೀಪಾ ರಾಜೇಂದ್ರ ಚೋಳನ್ , ಯೋಜನೆ, ಕಾರ್ಯಕ್ರಮಗಳು, ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಕಾರ್ಯದರ್ಶಿ ರಮಣದೀಪ್ ಚೌಧರಿ, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾದ ಪ್ರಭುಲಿಂಗ ಕವಳಿಕಟ್ಟಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ್ ಜಗದೀಶ್ , ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರು ಆಗಮಿಸುವರು.
ಅತಿಥಿಗಳಾಗಿ ಗೌರವಾನ್ವಿತ ನಗರಸಭಾ ಸದಸ್ಯರುಗಳು ಹಾಗೂ ನಾಮನಿರ್ದೇಶನ ಸದಸ್ಯರುಗಳು ಆಗಮಿಸುವರು.
ಗದಗ ಬೆಟಗೇರಿ ನಗರಸಭೆ ಪೌರಾಯುಕ್ತ ರಾಜಾರಾಮ ಶಿವಾಜಿ ಪವಾರ ಹಾಗೂ ಗದಗ ಬೆಟಗೇರಿ ನಗರಸಭೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಚ್.ಎ. ಬಂಡಿವಡ್ಡರ ಸರ್ವರಿಗೂ ಸ್ವಾಗತ ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP