ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯ ಅರ್ಹರಿಗೆ ಪೂರ್ಣ ಪ್ರಮಾಣದಲ್ಲಿ ದೊರಕಲಿ
ಗದಗ, 14 ಆಗಸ್ಟ್ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರದಿಂದ ಜಾರಿಯಾಗಿರುವ ಪಂಚ ಗ್ಯಾರಂಟಿ ಯೋಜನೆಗಳು ಬಡಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಉದ್ದೇಶ ಹೊಂದಿದ್ದು ಈ ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ಒದಗಿಸುವಲ್ಲಿ ವಿಳಂಬವಾಗಬಾರದು. ಗ್ಯಾರಂಟಿ ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ಪೂರ್ಣ
ಪೋಟೋ


ಗದಗ, 14 ಆಗಸ್ಟ್ (ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರದಿಂದ ಜಾರಿಯಾಗಿರುವ ಪಂಚ ಗ್ಯಾರಂಟಿ ಯೋಜನೆಗಳು ಬಡಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಉದ್ದೇಶ ಹೊಂದಿದ್ದು ಈ ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ಒದಗಿಸುವಲ್ಲಿ ವಿಳಂಬವಾಗಬಾರದು. ಗ್ಯಾರಂಟಿ ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ಪೂರ್ಣ ಪ್ರಮಾಣದಲ್ಲಿ ದೊರಕುವಂತಾಗಬೇಕು. ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಶೇ 100 ರಷ್ಟು ಸಾಧಿಸಲು ಸಂಬಂಧಿತ ಅಧಿಕಾರಿಗಳು ಆಸಕ್ತಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ಗದಗ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ಅವರು ಸೂಚಿಸಿದರು.

ನಗರದ ಉಪವಿಭಾಗಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿರುವ ತಾಲೂಕು ಪಂಚ ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರ ಕಚೇರಿಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪಂಚ ಗ್ಯಾರಂಟಿ ಯೋಜನೆಯ ಮಹತ್ವವನ್ನು ಅರ್ಧೆಸಿಕೊಳ್ಳುವುದು ಹಾಗೂ ಅವುಗಳ ಪೂರ್ಣ ಪ್ರಮಾಣದ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ತಲುಪಿಸುವುದು ಸಂಬಂಧಿತ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದರು.

ಪಂಚ ಗ್ಯಾರಂಟಿ ಯೋಜನೆ ಲಭಿಸುವಲ್ಲಿ ಫಲಾನುಭವಿಗಳಿಗೆ ಯಾವುದೇ ಅಡಚಣೆಗಳು ಉಂಟಾದರೆ ಅಂತಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಪ್ರತಿನಿಧಿಗಳ ಸಹಕಾರ ಈ ನಿಟ್ಟಿನಲ್ಲಿ ಸದಾ ಇರುತ್ತದೆ. ಮಹಿಳಾ ಪ್ರಯಾಣಿಕರಿಗೆ ಅನುಕೂಲವಾಗುವ ಶಕ್ತಿ ಯೋಜನೆಯ ಸೌಲಭ್ಯ ನಿಗದಿತ ಕಾಲಾವಧಿಯಲ್ಲಿಯೇ ದೊರಕಬೇಕು. ಮಹಿಳೆಯರು ಶಕ್ತಿ ಯೋಜನೆ ಸೌಲಭ್ಯದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದರು.

ಗದಗ ಬೆಟಗೇರಿಯಲ್ಲಿ ಸಾರ್ವಜನಿಕರಿಗೆ ಸಿಟಿ ಬಸ್‌ನ ಸಂಚಾರಕ್ಕೆ ಅನುಕೂಲವಾಗುವಂತೆ ಅವಶ್ಯಕ ಸ್ಥಳಗಳ ರೂಟ್ ಮ್ಯಾಪ್ ತಯಾರಿಸಿಕೊಂಡು ಹೆಚ್ಚುವರಿಯಾಗಿ ಸಿಟಿ ಬಸ್‌ಗಳ ವ್ಯವಸ್ಥೆ ಕಲ್ಪಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಜಿಲ್ಲೆಯ ಬಸ್ ನಿಲ್ದಾಣಗಳಿಗೆ ವಾರಕ್ಕೊಮ್ಮೆ ಭೇಟಿ ನೀಡಿ ಅಲ್ಲಿನ ಮೂಲಭೂತ ಸೌಕರ್ಯ ಸೇರಿದಂತೆ ಸ್ವಚ್ಛತೆಯ ಕುರಿತು ನಿಗಾ ವಹಿಸಬೇಕು. ಯುವ ನಿಧಿ ಯೋಜನೆಯ ದುರುಪಯೋಗವಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಗ್ಯಾರಂಟಿ ಯೋಜನೆ ಅನುಷ್ಟಾನದಲ್ಲಿ ಪ್ರಾಮಾಣಿಕತನವಿರಬೇಕು. ಭ್ರಷ್ಟಾಚಾರ ರಹಿತ ಪಾರದರ್ಶಕ ಆಡಳಿತ ನಡೆಸಿ ಅರ್ಹರು ಇದರ ಲಾಭ ಪಡೆಯುವಂತಾಗಬೇಕು ಎಂದು ಅಶೋಕ ಮಂದಾಲಿ ತಿಳಿಸಿದರು.

ಗದಗ ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಸದಸ್ಯರಾದ ಕೃಷ್ಣಗೌಡ ಎಚ್. ಪಾಟೀಲ ಅವರು ಮಾತನಾಡಿ ಪಡಿತರ ಅಂಗಡಿಗಳ ಮುಂದೆ ಪಂಚ ಗ್ಯಾರಂಟಿ ಯೋಜನೆಯನ್ನು ಬಿಂಬಿಸುವ ಫಲಕವನ್ನು ಪ್ರದರ್ಶಿಸಬೇಕು. ಅನ್ನಭಾಗ್ಯ ಯೋಜನೆಯಿಂದ ಅರ್ಹ ಫಲಾನುಭವಿಗಳು ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದರು.

ಪಂಚಗ್ಯಾರಂಟಿ ಯೋಜನೆಯ ಸಂಬಂಧಿತ ಅಧಿಕಾರಿಗಳು ಈ ಕೆಳಗಿನಂತೆ ಸಭೆಗೆ ಮಾಹಿತಿ ಒದಗಿಸಿದರು.

ಗೃಹಲಕ್ಷ್ಮಿ ಯೋಜನೆಯಡಿ ಮೇ 2025 ರವರೆಗೆ ಗದಗ ತಾಲೂಕಿನಲ್ಲಿ 81073 ನೋಂದಣಿಯಾದ ಅರ್ಜಿಗಳ ಪೈಕಿ 80588 ಅರ್ಜಿಗಳಿಗೆ ಮಂಜೂರಾತಿ ದೊರೆತಿದೆ. ಶೇ 99.4 ರಷ್ಟು ಪ್ರಗತಿ ಸಾಧಿಸಲಾಗಿದೆ.

ಜಿಲ್ಲೆಯಲ್ಲಿ ವಾಕರಸಾಸಂಸ್ಥೆಯಿಂದ ಗದಗ ಘಟಕದಲ್ಲಿ 11-6-2023 ರಿಂದ 10-8-2025 ರವರೆಗೆ 154.09 ಲಕ್ಷ ಪುರುಷ ಪ್ರಯಾಣಿಕರು ಹಾಗೂ 224.93 ಲಕ್ಷ ಮಹಿಳಾ ಪ್ರಯಾಣಿಕರು ಸೇರಿದಂತೆ ಒಟ್ಟಾರೆ 379.02 ಲಕ್ಷ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಶಕ್ತಿ ಯೋಜನೆಯಡಿ ಗದಗ ಘಟಕದಡಿ 687251977 ( 6872.52 ಲಕ್ಷ ) ಮಹಿಳಾ ಪ್ರಯಾಣಿಕರ ಆದಾಯವಾಗಿದೆ.

ಅನ್ನಭಾಗ್ಯ ಯೋಜನೆಯಡಿ ಗದಗ- ಬೆಟಗೇರಿ ಯಲ್ಲಿ ( ಐಆರ್‌ಎ) ಜುಲೈ 2025 ರ ಮಾಹೆಯಲ್ಲಿ ರಾಜ್ಯ ಸರಕಾರಿ ಅನ್ನಭಾಗ್ಯ ಹಂಚಿಕೆ ಯೋಜನೆಯಡಿ ಒಟ್ಟು 32686 ಪಡಿತರ ಕಾರ್ಡುಗಳಿದ್ದು ( ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡುಗಳು) 5536,05 ಕ್ವಿಂಟಲ್ ಅಕ್ಕಿ ಹಂಚಿಕೆ ಮಾಡಲಾಗಿದೆ. ಜುಲೈ -2025 ಮಾಹೆಯಲ್ಲಿ ( ಕೇಂದ್ರ ಸರ್ಕಾರ ) ಎನ್‌ಎಫ್‌ಎಸ್‌ಎ ಅಕ್ಕಿ ಹಂಚಿಕೆಯಡಿ ಒಟ್ಟು 32686 ಕಾರ್ಡುಗಳಿದ್ದು ( ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡುಗಳೂ) 2326.76 ಕ್ವಿಂಟಾಲ್ ಅಕ್ಕಿ ಹಂಚಿಕೆ ಮಾಡಲಾಗಿದೆ. ರಾಜ್ಯ ಸರ್ಕಾರದ ಅನ್ನಭಾಗ್ಯ ಅಕ್ಕಿ ಹಂಚಿಕೆಯಡಿ ಗದಗ ಗ್ರಾಮೀಣ ಭಾಗದಲ್ಲಿ ಒಟ್ಟು 48373 ಪಡಿತರ ಕಾರ್ಡುಗಳಿದ್ದು (ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡುಗಳು) 7478.75 ಕ್ವಿಂಟಲ್ ಹಂಚಿಕೆ ಮಾಡಲಾಗಿದೆ.

ಗೃಹಜ್ಯೋತಿ ಯೋಜನೆಯಡಿ 31-7-2025 ರವರೆಗೆ ಗದಗ ಶಹರ ಉಪವಿಭಾಗದಲ್ಲಿ 48199 ಸ್ಥಾವರಗಳು ಅರ್ಹವಾಗಿದ್ದು 47995 ಸ್ಥಾವರಗಳ ನೋಂದಣಿಯಾಗಿದ್ದು ಶೇ 99.58 ಪ್ರಗತಿಯಾಗಿದೆ. ದಿ: 31-7-2025 ರವರೆಗೆ ಗೃಹ ಜ್ಯೋತಿ ಯೋಜನೆಯಡಿ ಗದಗ ಗ್ರಾಮೀಣ ಉಪವಿಭಾಗದಲ್ಲಿ 53268 ಸ್ಥಾವರಗಳು ಅರ್ಹವಾಗಿದ್ದು 53070 ಸ್ಥಾವರಗಳ ನೊಂದಣಿಯಾಗಿವೆ. ಶೇ 99.63 ಪ್ರಗತಿಯಾಗಿದೆ.

ಯುವನಿಧಿ ಯೋಜನೆಯಡಿ ಗದಗ ತಾಲೂಕಿನಲ್ಲಿ 12-8-2025 ರವರೆಗೆ 2184 ಅಭ್ಯರ್ಥಿಗಳು ನೊಂದಾಯಿಸಿಕೊAಡಿದ್ದಾರೆ. ಅದರಲ್ಲಿ 1451 ಅರ್ಹ ಫಲಾನುಭವಿಗಳಿಗೆ ಡಿ.ಬಿ.ಟಿ ಮೂಲಕ ಹಣ ವರ್ಗಾವಣೆಯಾಗಿರುತ್ತದೆ ಎಂದು ಸಂಬ0ಧಿತ ಅಧಿಕಾರಿಗಳು ಮಾಹಿತಿ ಒದಗಿಸಿದರು.

ಸಭೆಯಲ್ಲಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮಲ್ಲಯ್ಯ ಕೆ, ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯರುಗಳಾದ ಶಂಭು ಕಾಳೆ, ಶ್ರೀಮತಿ ಸಾವಿತ್ರಿ ಹೂಗಾರ, ಸಂಗು ಕೆಕರಲಮಟ್ಟಿ, ಎನ್.ಬಿ.ದೇಸಾಯಿ, ಸಂಗಮೇಶ ಹಾದಿಮನಿ, ರಮೇಶ ಹೊನ್ನಿಕಾಯ್ಕರ, ದೇವರಡ್ಡಿ ತಿರ್ಲಾಪುರ, ಮಲ್ಲಪ್ಪ ದಂಡಿನ ಚಿಂಚಲಿ, ಗಣೇಶ ಸಿಂಗ್ ಮಿಟಾಡೆ, ಮಲ್ಲಪ್ಪ ಎಚ್ ಬಾರಕೇರ , ಭಾಷಾ ಮಲ್ಲಸಮುದ್ರ ಹಾಗೂ ಪಂಚ ಗ್ಯಾರಂಟಿ ಯೋಜನೆಗೆ ಸಂಬಂಧಿತ ಅಧಿಕಾರಿಗಳು ಹಾಜರಿದ್ದರು

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande