ಬೆಂಗಳೂರು, 14 ಆಗಸ್ಟ್ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ಇಂದಿನಿಂದ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ.
ಕರಾವಳಿ ಭಾಗದಲ್ಲಿ ಮಳೆಯಾಗಲಿದ್ದು ಆಗಸ್ಟ್ 19ರ ನಂತರ ಕಿತ್ತಳೆ ಎಚ್ಚರಿಕೆ ನೀಡಲಾಗಿದೆ.
ಉಳಿದ ಜಿಲ್ಲೆಗಳಿಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa