ವಿಜಯಪುರ, 15 ಆಗಸ್ಟ್ (ಹಿ.ಸ.) :
ಆ್ಯಂಕರ್ : ಸ್ವಾತಂತ್ರೋತ್ಸವ ದಿನಾಚರಣೆ ಯನ್ನು ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಅತ್ಯಂತ ಸಡಗರ,ಸಂಭ್ರಮದಿಂದ ಆಚರಣೆ ಮಾಡಲಾಯಿತು.
ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ್ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಧ್ವಜವಂದನೆ ಸ್ವೀಕರಿಸಿದರು.
ತೆರೆದ ವಾಹನದಲ್ಲಿ ಪೆರೇಡ್ ತಂಡಗಳ ಪರಿವೀಕ್ಷಣೆ ನಡೆಸಿದರು. ಪರೇಡ್ ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಪಥಸಂಚಲನದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ, ಐಆರ್ ಬಿ ಪೊಲೀಸ್ ಪಡೆದ ಗೃಹರಕ್ಷಕ ದಳ,ಅರಣ್ಯ ಇಲಾಖೆ,ಅಗ್ನಿಶಾಮಕ ಇಲಾಖೆ,ಸೈನಿಕ ಶಾಲೆ,ಎನ್ ಸಿ ಸಿ ಸೀನಿಯರ್ ಡಿವಿಜನ್, ಪೊಲೀಸ್ ವಾದ್ಯ ವೃಂದ ಸೇರಿದಂತೆ ಹಾಗೂ ವಿವಿಧ ಶಾಲಾ ಕಾಲೇಜು ತಂಡಗಳು ಭಾಗವಹಿಸಿದ್ದವು.
ಸಚಿವರು ಸ್ವಾತಂತ್ರೋತ್ಸವ ದಿನಾಚರಣೆಯ ಸಂದೇಶವನ್ನು ನೀಡಿದರು. ವಿವಿಧ ಶಾಲಾ ವಿದ್ಯಾರ್ಥಿಗಳು ಸಾಂಸ್ಕೃತಿ ಕಾರ್ಯಕ್ರಮ ಪ್ರಸ್ತುತಪಡಿಸಿದರು. ಸಮಾರಂಭದಲ್ಲಿ ಸಂಸದರಾದ ರಮೇಶ ಜಿಗಜಿಣಗಿ,ನಗರ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ,ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್. ರವಿಕುಮಾರ್,ಪರಿಷತ್ತಿನ ಶಾಸಕರಾದ ಕೇಶವ ಪ್ರಸಾದ ಎಸ್, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಕಾಂತಾ ನಾಯಕ,ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕನ್ನಾನ ಮುಶ್ರೀಪ್, ಮೇಯರ್ ಎಸ್.ಎಂ.ಕರಡಿ,ಉಪ ಮೇಯರ್ ಸುಮಿತ್ರಾ ಜಾಧವ,
ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ,
ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande