ಬಳ್ಳಾರಿ : ಕೋರ್ಟ್ ಆವರಣದಲ್ಲಿ ಪಾರ್ಕಿಂಗ್‍ಗಾಗಿ ವಕೀಲರ ಪ್ರತಿಭಟನೆ
ಬಳ್ಳಾರಿ, 15 ಆಗಸ್ಟ್ (ಹಿ.ಸ.) : ಆ್ಯಂಕರ್ : ಬಳ್ಳಾರಿಯಲ್ಲಿ 140 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದ ಆವರಣದಲ್ಲಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಕೈಗೊಳ್ಳಲು ಆಗ್ರಹಿಸಿ ವಕೀಲರು ಒಂದು ದಿನದ ಸಾಂಕೇತಿಕ ಧರಣಿ ನಡೆಸಿದ್ದಾರೆ. ಸುಸಜ್ಜಿತವಾದ ಜಿಲ್ಲಾ ನ್ಯಾಯ
ಬಳ್ಳಾರಿ : ಕೋರ್ಟ್ ಆವರಣದಲ್ಲಿ ಪಾರ್ಕಿಂಗ್‍ಗಾಗಿ ವಕೀಲರ ಪ್ರತಿಭಟನೆ


ಬಳ್ಳಾರಿ, 15 ಆಗಸ್ಟ್ (ಹಿ.ಸ.) :

ಆ್ಯಂಕರ್ : ಬಳ್ಳಾರಿಯಲ್ಲಿ 140 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದ ಆವರಣದಲ್ಲಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಕೈಗೊಳ್ಳಲು ಆಗ್ರಹಿಸಿ ವಕೀಲರು ಒಂದು ದಿನದ ಸಾಂಕೇತಿಕ ಧರಣಿ ನಡೆಸಿದ್ದಾರೆ.

ಸುಸಜ್ಜಿತವಾದ ಜಿಲ್ಲಾ ನ್ಯಾಯಾಲಯ ಸಂಕೀರ್ಣ ನಿರ್ಮಾಣವಾಗಿದೆ. ಆದರೆ ಪಾಕಿರ್ಂಗ್ ವ್ಯವಸ್ಥೆಯನ್ನು ನಿರ್ಮಾಣ ಮಾಡಿಲ್ಲ. ಬಳ್ಳಾರಿಯಲ್ಲಿ ಅತಿ ಹೆಚ್ಚು ಬಿಸಿಲು ಮತ್ತು ಬೇಸಿಗೆ ಕಾಲ ಇರುವ ಕಾರಣ ತಕ್ಷಣವೇ ಪಾರ್ಕಿಂಗ್ ವ್ಯವಸ್ಥೆಯನ್ನು ಪ್ರಾರಂಭಿಸಬೇಕು ಎಂದು ಅವರು ವಕೀಲರು ಅಧಿಕಾರಿಗಳಿಗೆ ಮನವಿ ಮಾಡಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande