ಹೊಸಪೇಟೆ, 15 ಆಗಸ್ಟ್ (ಹಿ.ಸ.) :
ಆ್ಯಂಕರ್ : ದೇಶದ ಸ್ವಾತಂತ್ರ್ಯಕ್ಕಾಗಿ ಬ್ರೀಟಿಷರ ವಿರುದ್ಧ ಹೋರಾಟ ಮಾ ಡಿದ ಎಲ್ಲಾ ವೀರಯೋಧರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಹೇಳಿದ್ದಾರೆ.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹೊಸಪೇಟೆ ನಗರಸಭೆ ಸಹಯೋಗದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೇರವೇರಿಸಿ, ರಾಷ್ಟ್ರಪಿತ ಮಹಾತ್ಮ ಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಶುಕ್ರವಾರ ಮಾತನಾಡಿದರು.
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ. ಬ್ರೀಟಿಷರ ವಿರುದ್ಧ ಹೋರಾಟ ನಡೆಸಿ ರಾಷ್ಟ್ರಕ್ಕೆ ಸ್ವಾತಂತ್ರವನ್ನು ತಂದು ಕೊಟ್ಟ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಸರ್ದಾರ್ ವಲ್ಲಭಭಾಯಿ ಪಟೇಲ್, ನೆಹರು, ಸುಭಾμï ಚಂದ್ರಬೋಸ್, ಅಬ್ದುಲ್ ಕಲಾಂ ಆಜಾದ್, ಭಗತ್ ಸಿಂಗ್, ಚಂದ್ರಶೇಖರ ಅಜಾದ್, ರಾಜ್ ಗುರು, ಸುಖ್ ದೇವ್ ಸೇರಿದಂತೆ ಸಾವಿರಾರು ವೀರಯೋಧರನ್ನು ಇಂದು ನಾವು ನೆನಪಿಸಿಕೊಳ್ಳಬೇಕು.
ರಾಜ್ಯ ಸರ್ಕಾರ ಆಡಳಿತಕ್ಕೆ ಬಂದು ಎರಡು ವರ್ಷ, ಎರಡು ತಿಂಗಳು ಪೂರೈಸಿದೆ. ಭರವಸೆ ನೀಡಿದ್ದ ಐದು ಗ್ಯಾರಂಟಿಗಳನ್ನು ಒಂದೇ ತಿಂಗಳಲ್ಲಿ ಅನುಷ್ಠಾನಗೊಳಿಸಿರುವುದು ಹೆಮ್ಮೆಯ ವಿಷಯ. ಗ್ಯಾರಂಟಿ ಯೋಜನೆಗಳ ಬಗ್ಗೆ ಅನೇಕ ಟೀಕೆಗಳು ಬಂದಿದ್ದವು. ಬಡವರಿಗೆ ಮನೆಗಳನ್ನು ಕಟ್ಟಿಕೊಡುವ ಆರನೇ ಗ್ಯಾರಂಟಿಯನ್ನು ನಾವು ಘೋಷಣೆ ಮಾಡಿರಲಿಲ್ಲ. ಆದರೆ ಅದು ಬಡಜನರ, ವಸತಿ ರಹಿತರ ಕಾಳಜಿಗೆ ವಿಶೇಷವಾಗಿ ಮನೆಗಳನ್ನು ನೀಡುವ ಚಿಂತನೆ ಮಾಡಲಾಗಿದೆ. ಸ್ಲಂ ಬೋರ್ಡ್ ನಿಂದ 1,80,253 ಮನೆಗಳು ಮತ್ತು ರಾಜೀವ ಗಾಂಧಿ ವಸತಿ ನಿಗಮದಿಂದ 47860 ಮನೆಗಳು ಸೇರಿ 2,30,000 ಮನೆಗಳನ್ನು ಈ ಹಿಂದಿನ ನಮ್ಮ ಸರ್ಕಾರದಲ್ಲಿ ಮಂಜೂರು ಮಾಡಲಾಗಿತ್ತು, ಇವುಗಳು ಕಾರಣಾಂತರದಿಂದ ಹಂಚಿಕೆಯಾಗಲಿಲ್ಲ, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಮಂಜೂರು ಮಾಡಲಾಗುತ್ತದೆ. ವಸತಿ ರಹಿತರ ಸಮಸ್ಯೆಗಳಿಗೆ ಸ್ಪಂದಿಸಿ ಈಗಾಗಲೇ 36799 ಮನೆಗಳನ್ನು ನೀಡಿ ಇದಕ್ಕಾಗಿ ರೂ.500 ಕೋಟಿ ಬಿಡುಗಡೆ ಮಾಡಲಾಗಿತ್ತು. 2026 ರ ಅಂತ್ಯದೊಳಗೆ ಫಲಾನುಭವಿಗಳಿಗೆ ಪೂರ್ಣ ಪ್ರಮಾಣದಲ್ಲಿ ಸೂರು ಒದಗಿಸುವ ಯೋಜನೆಗೆ ಅನುದಾನ ನೀಡುವುದಾಗಿ ಸಿಎಂ ಸಿದ್ದರಾಮಯ್ಯನವರಯ ಭರವಸೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ, ಮಧ್ಯಮ ವರ್ಗದವರಿಗೆ ಸಾಕಷ್ಟು ಅನುಕೂಲಗಳಾಗಿದ್ದು ಯಾವುದೇ ಕಾರಣಕ್ಕೂ ಯೋಜನೆಗಳು ಸ್ಥಗಿತವಾಗುವುದಿಲ್ಲ. ಈ ಯೋಜನೆಗಳಿಂದ ಜನರಿಗೆ ಸಾಕಷ್ಟು ಅನುಕೂಲವಾಗಿದ್ದು ಆರ್ಥಿಕ ಮಟ್ಟ ಸುಧಾರಣೆಯಾಗಿದೆ ಎಂದರು.
ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿ ವಿತರಣೆ : ವೇದಿಕೆಯಲ್ಲಿ 2024ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕøತರಾದ ಹೊಸಪೇಟೆ ತಹಶೀಲ್ದಾರ ಎಂ.ಶೃತಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಂಜುನಾಥ, ಹಗರಿಬೊಮ್ಮನಹಳ್ಳಿ ಬಿಇಒ ಮೈಲೇಶ್ ಬೇವೂರು, ಜಿಲ್ಲಾ ನಗರಾಭಿವೃದ್ಧಿ ಕೋಶ ಜೆಇ ವೀರೇಶ್, ಸರ್ಕಾರಿ ನೂರು ಹಾಸಿಗೆ ಆಸ್ಪತ್ರೆ ವೈದ್ಯ ಡಾ.ಸೋಮಶೇಖರ್, ಹಿಂದೂ ಧಾರ್ಮಿಕ ದತ್ತಿ ಇಲಾಖೆ ಕಾರ್ಯ ನಿರ್ವಾಹಕ ಅಧಿಕಾರಿ ಹನುಮಂತಪ್ಪ, ಹೊಸಪೇಟೆ ಗ್ರಾಮ ಆಡಳಿತ ಅಧಿಕಾರಿ ಚಂದನಾ ಪವಾರ್, ತಾಯಿ ಮತ್ತು ಮಕ್ಕಳ ಆಸ್ಪತ್ರೆ ಶೂಶ್ರಷಕಿ ವೀಣಾ, ಅಂಕಸಮುದ್ರ ಗ್ರಾಮ ಆಡಳಿತ ಅಧಿಕಾರಿ ಯಂಕಾರೆಡ್ಡಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಂಕರ ನಾಯ್ಕ ಹಾಗೂ 2025 ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕøತರಾದ ಹೊಸಪೇಟೆ ಸಹಾಯಕ ಆಯುಕ್ತರಾದ ಪಿ.ವಿವೇಕಾನಂದ, ಹರಪನಹಳ್ಳಿ ತಾಲೂಕು ಚಟ್ನಿಹಳ್ಳಿ ಪಿಡಿಒ ಹೆಚ್.ಸಂಗಪ್ಪ, ಮಗಿಮಾವಿನಹಳ್ಳಿ ಪಿಹೆಚ್ಸಿ ವೈದ್ಯೆ ಡಾ.ಅನುಷಾ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಪ್ರಭುಲಿಂಗ ತಳಕೇರಿ, ಉಚ್ಚಂಗಿದುರ್ಗದ ಉಚ್ಚಂಗಿದೇವಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಪ್ಪ, ಹರಪನಹಳ್ಳಿ ತಹಶೀಲ್ದಾರ ಗಿರೀಶ್ ಬಾಬು, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮನೋಹರಗೌಡ, ಜಿಲ್ಲಾಧಿಕಾರಿ ಕಚೇರಿ ಗ್ರಾಮ ಆಡಳಿತ ಅಧಿಕಾರಿ ಸವಿತಾ, ಜಿಪಂ ಯೋಜನಾಧಿಕಾರಿ ಜೆ.ಎಂ.ಅನ್ನದಾನಸ್ವಾಮಿ, ಡಿಯುಡಿಸಿ ಯೋಜನಾ ನಿರ್ದೇಶಕ ಮನೋಹರ ಇವರುಗಳನ್ನು ಗೌರವಿಸಿ ಸನ್ಮಾನಿಸಲಾಯಿತು.
ಆಕರ್ಷಕ ಪಥಸಂಚಲನ, ಸಾಂಸ್ಕøತಿಕ ಕಾರ್ಯಕ್ರಮಗಳು : ಪರೇಡ್ ಕಮಾಂಡರ್ ಗೋವಿಂದ್ ನೇತೃತ್ವದಲ್ಲಿ ಪೆÇಲೀಸ್, ಗೃಹರಕ್ಷದಳ, ಎನ್.ಸಿ.ಸಿ, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ, ಪೌರಕಾರ್ಮಿಕರು ಸೇರಿದಂತೆ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಒಳಗೊಂಡಂತೆ ಆಕರ್ಷಕ ಪಥಸಂಚಲನ ನಡೆಯಿತು. ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು.
ಈ ವೇಳೆ ಕಾರ್ಯಕ್ರಮದಲ್ಲಿ ಹೊಸಪೇಟೆ ಶಾಸಕ ಹೆಚ್.ಆರ್.ಗವಿಯಪ್ಪ ಅಧ್ಯಕ್ಷತೆ ವಹಿಸಿದ್ದರು. ಹೊಸಪೇಟೆ ನಗರಸಭೆ ಅಧ್ಯಕ್ಷರಾದ ಎನ್.ರೂಪೇಶ್ ಕುಮಾರ್, ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎನ್.ಎಫ್.ಇಮಾಮ್ ನಿಯಾಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಕೆ.ಶಿವಮೂರ್ತಿ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಅಪರ ಜಿಲ್ಲಾಧಿಕಾರಿ ಈ.ಬಾಲಕೃಷ್ಣಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ವೇದಿಕೆಯಲ್ಲಿದ್ದರು
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್