ಸ್ವಾವಲಂಬನೆಯೇ ಅಭಿವೃದ್ಧಿ ಹೊಂದಿದ ಭಾರತದ ಆಧಾರ : ಪ್ರಧಾನಿ ಮೋದಿ
ನವದೆಹಲಿ, 15 ಆಗಸ್ಟ್ (ಹಿ.ಸ.) : ಆ್ಯಂಕರ್ : 79ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪು ಕೋಟೆಯ ಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಅಭಿವೃದ್ಧಿ ಹೊಂದಿದ ಭಾರತದ ಆಧಾರ ಸ್ವಾವಲಂಬನೆ ಎಂದರು. ಶಕ್ತಿಯನ್ನು ಕಾಪಾಡಿಕೊಳ್ಳಲು ಮತ್ತು ಬಲಪಡಿಸಲು ಸ್ವಾವಲಂಬನೆ ಅಗತ್ಯವಿದ
Pm


ನವದೆಹಲಿ, 15 ಆಗಸ್ಟ್ (ಹಿ.ಸ.) :

ಆ್ಯಂಕರ್ : 79ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪು ಕೋಟೆಯ ಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಅಭಿವೃದ್ಧಿ ಹೊಂದಿದ ಭಾರತದ ಆಧಾರ ಸ್ವಾವಲಂಬನೆ ಎಂದರು.

ಶಕ್ತಿಯನ್ನು ಕಾಪಾಡಿಕೊಳ್ಳಲು ಮತ್ತು ಬಲಪಡಿಸಲು ಸ್ವಾವಲಂಬನೆ ಅಗತ್ಯವಿದೆ ಎಂದ ಅವರು, ಇತರರ ಮೇಲಿನ ಅವಲಂಬನೆ ಸ್ವಾತಂತ್ರ್ಯದ ಮೇಲೆ ಪ್ರಶ್ನೆ ಎತ್ತುತ್ತದೆ ಎಂದು ಅವರು ಎಚ್ಚರಿಸಿದರು.

ಪಾಕಿಸ್ತಾನದ ಪರಮಾಣು ಬೆದರಿಕೆ ಕುರಿತು ಮಾತನಾಡಿದ ಅವರು ಯಾವುದೇ ದುಸ್ಸಾಹಸಕ್ಕೆ ತಕ್ಕ ಪ್ರತಿಕ್ರಿಯೆ ನೀಡಲಾಗುವುದು ಎಂದು ಎಚ್ಚರಿಸಿದರು. ರಕ್ತ ಮತ್ತು ನೀರು ಒಟ್ಟಿಗೆ ಹರಿಯಲು ಸಾಧ್ಯವಿಲ್ಲ ಎಂದು ಪುನರುಚ್ಚರಿಸಿ, ಸಿಂಧೂ ಜಲ ಒಪ್ಪಂದವನ್ನು ಏಕಪಕ್ಷೀಯ ಎಂದು ಕರೆದ ಅವರು, ಈ ಒಪ್ಪಂದ ದೇಶದ ರೈತರಿಗೆ ಅಪಾರ ಹಾನಿ ಉಂಟುಮಾಡಿದೆ ಎಂದು ಹೇಳಿದರು.

ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರ ತ್ಯಾಗವನ್ನು ಸ್ಮರಿಸಿದ ಪ್ರಧಾನಿ, “370ನೇ ವಿಧಿಯನ್ನು ರದ್ದುಪಡಿಸುವ ಮೂಲಕ ಒಂದು ದೇಶ – ಒಂದು ಸಂವಿಧಾನ ಮಂತ್ರವನ್ನು ನನಸಾಗಿಸಿದ್ದೇವೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande