ಗದಗ, 16 ಆಗಸ್ಟ್ (ಹಿ.ಸ.)
ಆ್ಯಂಕರ್:
ವಾರ್ಡ ಸಭೆ, ಗ್ರಾಪಂ ಸಭೆ ಮತ್ತು ಸ್ಥಳಿಯ ಸಂಸ್ಥೆಗಳಲ್ಲಿ ವಾರ್ಡ ಸಬೆಗಳನ್ನು ಆದಷ್ಟು ಬೇಗನೇ ರ್ಪೂಣಗೊಳಿಸಿ, ಅಭಿವೃದ್ಧಿ ಯೋಜನೆಗಳ ಕರಡು ಪ್ರತಿ ಸಿದ್ದಗೊಳಿಸಿ ಸೆ. 30ರ ಒಳಗಾಗಿ ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸಬೇಕು. ಅ.2 ರಂದು ಸಲ್ಲಿಸಿದ ಕರಡುಪ್ರತಿಗಳ ಪರಿಶೀಲಿಸಿ ಸರ್ಕಾರದ ಅನುಮೋದನೆ ಕಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಏರ್ಪಡಿಸಿದ್ದ ಯೋಜನೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮೀಣ ಮತ್ತು ನಗರದ ಪ್ರದೇಶಗಳಲ್ಲಿ ಆ. 30ರ ಒಳಗಾಗಿ ವಾರ್ಡ ಸಭೆ ನಡೆಸಬೇಕು. ಸೆ. 30ರ ಒಳಗಾಗಿ ಗ್ರಾಪಂ ಸಭೆ ಜರುಗಿಸಬೇಕು. ತಾಪಂ ಮತ್ತು ಸ್ಥಳಿಯ ಸಂಸ್ಥೆಯ ಸಭೆಗಳನ್ನು ಸೆ. 20ರ ಒಳಗಾಗಿ ಜರುಗಿಸಿ, ಅಭೀವೃದ್ದಿ ಯೋಜನೆಗಳ ಕರಡು ಪ್ರತಿಗಳನ್ನು ಸೆ. 30ರ ಒಳಗಾಗಿ ಜಿಪಂಗೆ ಸಲ್ಲಿಸಬೇಕು ಎಂದು ಗಡವು ನೀಡಿದರು.
ಇದೇ ವೇಳೆ ಸಭೆಗಳನ್ನು ಜರುಗಿಸದೇ ಅಭಿವೃದ್ಧಿ ಯೋಜನೆಗೆ ಕರಡು ಪ್ರತಿಯನ್ನು ತಯಾರಿಸಲು ಸಹಕಾರ ನೀಡದಿರುವ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ನೊಟೀಸ್ ನೀಡಬೇಕು. ಕೆಳಹಂತದ ಅಧಿಕಾರಿಗಳಿಗೆ ಕರಡು ಪ್ರತಿ ಸಿದ್ಧತೆಯಲ್ಲಿ ಹಾಗೂ ಅಧಿಕಾರಿ ಕಾರ್ಯವ್ಯಾಪ್ತಿ ಏನು ಎಂಬುದರ ಕುರಿತು ಮಾರ್ಗಸೂಚಿ ಪ್ರತಿ ನೀಡುವ ಮೂಲಕ ಅಧಿಕಾರಿಗಳಿಗೆ ತಿಳುವಳಿಕೆ ನೀಡಬೇಕು ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಈ ಹಿಂದಿನ ಗ್ರಾಪಂ, ಸ್ಥಳೀಯ ಸಂಸ್ಥೆಗಳ ವಾರ್ಡ ಸಭೆ ನಡೆಯದಿರುವ ಕುರಿತು ಬೇಸರ ವ್ಯಕ್ತ ಪಡಿಸಿದ ಸಚಿವರು, ನಗರ ವ್ಯಾಪ್ತಿಯಲ್ಲಿ ಕೇವಲ 54 ವಾರ್ಡ ಸಭೆಗಳು ಜರುಗಿವೆ. ಇನ್ನೂ 150 ಕ್ಕೂ ಅಧಿಕ ಸಭೆಗಳು ಜರುಗಬೇಕು. ಗ್ರಾಮೀಣ ಪ್ರದೇಶದಲ್ಲಿ ವಾರ್ಡ ಸಭೆ ಮತ್ತು ಗ್ರಾಮಸಭೆಗಳು ಜರುಗುತ್ತಿಲ್ಲ. ನಿರ್ಲಕ್ಷ್ಯ ವಹಿಸಲಾಗುತ್ತಿದೆ. ಕಾನೂನು ತಿರಸ್ಕರಿಸಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ಕನಿಕರ ತೋರದೆ ಕ್ರಮ ವಹಿಸಲಾಗುವುದು ಎಂದರು.
ಜಿಲ್ಲಾಡಳಿತ ಸೂಚಿತ ದಿನಾಂಕದ ಒಳಗೆ ವಾರ್ಡಸಭೆ ಜರುಗಿಸಿ, ಕರಡುಪ್ರತಿಗಳನ್ನು ಅನುಮೋದನೆ ಸಲ್ಲಿಸಬೇಕು. ಎಲ್ಲ ಸಭೆಗಳ ವಿಡಿಯೋ ಗ್ರಾಫ್ ಮಾಡಬೇಕು ಎಂದು ಸೂಚಿಸಿದರು.
ಮಾಜಿ ಶಾಸಕ ಡಿ. ಆರ್. ಪಾಟೀಲ ಮಾತನಾಡಿ, ಗ್ರಾಪಂ ಸಭೆಗೆ ಸೆಕ್ರೆಟರಿ, ಪಿಡಿಒಗಳು ಹಾಜರಾಗದೇ ವೈಮನಸ್ಸು ಮೂಡಿ ಸಭೆ ಬರಕಾಸ್ತು ಆಗುತ್ತಿವೆ. ಗ್ರಾಪಂ ಅಧ್ಯಕ್ಷನ ಆದೇಶದಂತೆ ಪಿಡಿಓ ಸಭೆ ಕರೆದಿರಯತ್ತಾರೆ. ಹಾಗಾಗಿ ಎಲ್ಲರೂ ಸಭೆಗೆ ಹಾಜರಾಗಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಮಾತನಾಡಿ, ಗ್ರಾಮ ಸಭೆಗಳನ್ನು ಬೆಳಗ್ಗೆ 10 ಗಂಟೆ ಒಳಗಾಗಿ ಜರಗಿಸುವುದು ಸೂಕ್ತ. ಕೆಲಸದ ಅವಧಿಯಲ್ಲಿ ಸಭೆಗಳನ್ನು ಹಮ್ಮಿಕೊಂಡರೆ ರೈತರು ಹೊಲಗದ್ದೆಗಳಿಗೆ ತೆರಳಿರುತ್ತಾರೆ. ಹಾಗಾಗಿ ಬೆಳಗಿನ ಜಾವ ಹಮ್ಮಿಕೊಳ್ಳುವುದು ಸೂಕ್ತ ಎಂದರು.
ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರು ಮಾತನಾಡಿ, ಮುಳಗುಂದದಲ್ಲಿ ಸಭೆ ನಡೆದಿದೆ. ಇನ್ನೂಳಿದ ಸ್ಥಳಿಯ ಸಂಸ್ಥೆ ವ್ಯಾಪ್ತಿಯಲ್ಲಿ ಸಭೆ ನಡೆಸುವುದು ಬಾಕಿ ಇದೆ ಎಂದು ಮಾಹಿತಿ ನೀಡಿದರು.
ಜಿಪಂ ಸಿಇಓ ಭರತ್ ಎಸ್ ಮಾತನಾಡಿ, ಕರಡು ಪ್ರತಿ ಸಲ್ಲಿಸುವಾಗ ದಾಖಲಾತಿಗಳನ್ನು ಪರಿರ್ಪೂಣ ಗೊಳಿಸಬೇಕು. ರಾಜ್ಯದಲ್ಲಿ ಮಾದರಿ ಗ್ರಾಮಸಭೆಗಳು ಜರುಗಬೇಕು ಎಂದರು.
ಸಭೆಯಲ್ಲಿ ತಾಪಂ, ಗ್ರಾಪಂ, ಜಿಪಂ ಅಧಿಕಾರಿಗಳು, ಪಿಡಿಓಗಳು, ಸಹಕಾರ ಸಂಘ, ಹಾಲು ಉತ್ಪಾದಕರ ಒಕ್ಕೂಟ ಪದಾಧಿಕಾರಿಗಳು ಇದ್ದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP