ಬೆಳಗಾವಿ, 16 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬೆಳಗಾವಿಯಿಂದ ಮುಂಬೈಗೆ ಹೊರಟಿದ್ದ ಸ್ಟಾರ್ ಏರ್ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಪರಿಣಾಮ ಇಂದು ಬೆಳಗ್ಗೆ ತುರ್ತು ಭೂ ಸ್ಪರ್ಶ ಮಾಡಿದೆ.
ಬೆಳಿಗ್ಗೆ 7.50ಕ್ಕೆ ಹಾರಾಟ ಆರಂಭಿಸಿದ್ದ ವಿಮಾನವು 8.30ರ ಸುಮಾರಿಗೆ ಬೆಳಗಾವಿಗೆ ವಾಪಸ್ ಬಂದು ಸುರಕ್ಷಿತವಾಗಿ ಇಳಿಯಿತು.
ಈ ವೇಳೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 48 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ.
ಮುಂಬೈಗೆ ತೆರಳಬೇಕಿದ್ದ ಪ್ರಯಾಣಿಕರಿಗೆ ಬೇರೊಂದು ವಿಮಾನದ ವ್ಯವಸ್ಥೆ ಮಾಡಲಾಗಿದೆ ಎಂದು ವಿಮಾನ ನಿಲ್ದಾಣ ನಿರ್ದೇಶಕ ಎಸ್. ತ್ಯಾಗರಾಜನ್ ಮಾಹಿತಿ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa