ಕುಲ್ಗಾಮ್ : ಭದ್ರತಾ ಪಡೆಗಳ ಕಾರ್ಯಾಚರಣೆ ಓರ್ವ ಉಗ್ರನ ಹತ್ಯೆ
ಕುಲ್ಗಾಮ್, 2 ಆಗಸ್ಟ್ (ಹಿ.ಸ.) : ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅಖಾಲ್ ಪ್ರದೇಶದಲ್ಲಿ ಶುಕ್ರವಾರ ಸಂಜೆ ಪ್ರಾರಂಭವಾದ ಸೇನೆಯ ಕಾರ್ಯಾಚರಣೆಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿವೆ. ಈ ಪ್ರದೇಶದಲ್ಲಿ ಇನ್ನೂ ಎರಡರಿಂದ ಮೂವರು ಭಯೋತ್ಪಾದಕರು ಅಡಗಿಕೊಂಡಿರುವ ಶಂಕೆ ವ್ಯಕ್
Encounter


ಕುಲ್ಗಾಮ್, 2 ಆಗಸ್ಟ್ (ಹಿ.ಸ.) :

ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅಖಾಲ್ ಪ್ರದೇಶದಲ್ಲಿ ಶುಕ್ರವಾರ ಸಂಜೆ ಪ್ರಾರಂಭವಾದ ಸೇನೆಯ ಕಾರ್ಯಾಚರಣೆಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿವೆ.

ಈ ಪ್ರದೇಶದಲ್ಲಿ ಇನ್ನೂ ಎರಡರಿಂದ ಮೂವರು ಭಯೋತ್ಪಾದಕರು ಅಡಗಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರೆದಿದೆ.

ದಕ್ಷಿಣ ಕಾಶ್ಮೀರದ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಮಾಹಿತಿಯ ಮೇರೆಗೆ ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ ಜಂಟಿ ತಂಡವು ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಎಕ್ಸ್‌ಪೋಸ್ಟ್‌ನಲ್ಲಿ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande