ಶ್ರಾವಣಮಾಸದ ಅಂಗವಾಗಿ ದೇವಾಲಯಗಳಲ್ಲಿ ವಿಶೇಷ ಪೂಜೆ
ಶ್ರಾವಣಮಾಸದ ಅಂಗವಾಗಿ ದೇವಾಲಯಗಳಲ್ಲಿ ವಿಶೇಷ ಪೂಜೆ
ಕೋಲಾರದ ದೊಡ್ಡಪೇಟೆಯ ಶ್ರೀವೆಂಕಟರಮಣಸ್ವಾಮಿ ದೇವಾಲಯದಲ್ಲಿ ಸ್ವಾಮಿಯ ದರ್ಶನಕ್ಕೆ ಸಾಲುಗಟ್ಟಿ ನಿಂತಿರುವ ಭಕ್ತರು.


ಕೋಲಾರ, ೦೨ ಆಗಸ್ಟ್ (ಹಿ.ಸ) :

ಆ್ಯಂಕರ್ : ಶ್ರಾವಣ ಮಾಸದ ಎರಡನೇ ಶನಿವಾರ ಜಿಲ್ಲಾದ್ಯಂತ ದೇವಾಲಯಗಳಲ್ಲಿ ವಿಶೇಷಪೂಜೆ ನಡೆದಿದ್ದು, ಜಿಲ್ಲೆಯ ವೆಂಕಟರಮಣಸ್ವಾಮಿ,ಆAಜನೇಯ, ಶ್ರೀರಾಮ, ಶನೇಶ್ವರಸ್ವಾಮಿ ದೇವಾಲಯಗಳತ್ತ ಭಕ್ತಸಾಗರ ಹರಿದು ಬಂದಿದ್ದು, ಉದ್ದುದ್ದ ಸಾಲುಗಳು ಕಂಡು ಬಂತು

ಮೊದಲ ಶ್ರಾವಣ ಶನಿವಾರ ಅಷ್ಟೊಂದು ಒತ್ತಡ ದೇವಾಲಯಗಳಲ್ಲಿ ಕಂಡು ಬರಲಿಲ್ಲ ಆದರೆ ೨ನೇ ಶನಿವಾರವಾದ ಇಂದು ಇಡೀ ದಿನ ಸಾವಿರಾರು ಸಂಖ್ಯೆಯಲ್ಲಿ ಭಕ್ತಸಾಗರ ಸಾಲುಗಟ್ಟಿ ನಿಂತು ಸ್ವಾಮಿಯ ದರ್ಶನ ಪಡೆದಿದ್ದು ಕಂಡು ಬಂತು. ದೇವಾಲಯಗಳಲ್ಲಿ ವಿಶಿಷ್ಟ ರೀತಿಯಲ್ಲಿ ಅಲಂಕರಿಸಲಾಗಿದ್ದು, ವಿಶೇಷ ಅಲಂಕಾರದ ವೈಭವ ನಡೆದಿದೆ.

ಶ್ರಾವಣ ಶನಿವಾರದ ಪ್ರಮುಖ ಅದಿದೇವತೆಯಾದ ಬಾಲಾಜಿ, ವೆಂಕಟೇಶ್ವರಸ್ವಾಮಿಯ ದೇವಾಲಯಕ್ಕೆ ಹೆಚ್ಚಿನ ಭಕ್ತರು ಆಗಮಿಸಿದ್ದು, ಮುಂಜಾನೆ ೪ ಗಂಟೆಯಿAದಲೇ ಪೂಜಾ ಕಾರ್ಯಕ್ರಮಗಳು ಆರಂಭಗೊAಡವು.ದೇವಾಲಯದ ರಾಜಗೋಪುರ,ಮುಖದ್ವಾರದಲ್ಲಿ ವಿದ್ಯುತ್ ದೀಪಗಳ ಜತೆ ವಿಶಿಷ್ಟ ರೀತಿಯ ಹೂಗಳಿಂದ ಅಲಂಕರಿಸಲಾಗಿತ್ತು.

ಹೆಚ್ಚಿನ ಜನದಟ್ಟಣೆಯಿಂದಾಗಿ ದೇವಾಲಯದ ಮುಂಭಾಗದ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದ್ದು, ಮುಂಜಾನೆ ಸ್ವಾಮಿಗೆ ಕ್ಷೀರಾಭಿಷೇಕ ಮಾಡಿದ್ದು, ಬೆಳಗ್ಗೆ ೬ ಗಂಟೆಯಿAದಲೇ ಭಕ್ತರು ಸಾಲುಗಟ್ಟಿ ನಿಂತು ಸ್ವಾಮಿಯ ದರ್ಶನ ಪಡೆದರು.

೨ನೇ ಶ್ರಾವಣ ಶನಿವಾರದ ಅಂಗವಾಗಿ ದೇವಾಲಯಕ್ಕೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಆಗಮಿಸಿ ದೇವರ ದರ್ಶನ ಪಡೆದರು. ದೇವಾಲಯದ ಪ್ರಧಾನ ಅರ್ಚಕ ವೆಂಕಟೇಶ್ ದೀಕ್ಷಿತ್ ಮತ್ತಿತರರು ಪೂಜೆಯ ನೇತೃತ್ವ ವಹಿಸಿದ್ದರು.

ತಾಲ್ಲೂಕಿನ ರಾಷ್ಟಿçÃಯ ಹೆದ್ದಾರಿ-೭೫ರ ಅರಾಭಿಕೊತ್ತನೂರು ಗೇಟ್‌ನಲ್ಲಿರುವ ಶನೇಶ್ವರ ಸ್ವಾಮಿ ದೇವಾಲಯದಲ್ಲಿ ೨ನೇ ಶ್ರಾವಣ ಶನಿವಾರದ ಅಂಗವಾಗಿ ವಿಶೇಷ ಪೂಜೆ ನಡೆದಿದ್ದು, ಸ್ವಾಮಿಯನ್ನು ವಿಶಿಷ್ಟವಾಗಿ ಅಲಂಕರಿಸಲಾಗಿತ್ತು. ಗ್ರಾಮದ ಮುಖಂಡರಾದ ನಂಜುAಡಗೌಡ, ನಾರಾಯಣಶೆಟ್ಟಿ, ಶ್ರೀನಿವಾಸ್, ಮುಳ್ಳಹಳ್ಳಿ ಮಂಜುನಾಥ್, ಮುನಿರಾಜು ಸೇರಿದಂತೆ ನೂರಾರು ಮಂದಿ ಗ್ರಾಮಸ್ಥರು ಮತ್ತಿತರರು ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಕೋಲಾರದ ನಗರದ ಶನೇಶ್ವರಸ್ವಾಮಿ ದೇವಾಲಯಗಳಲ್ಲಿ ಶ್ರಾವಣದ ೨ನೇ ಶನಿವಾರದ ಅಂಗವಾಗಿ ವಿಶೇಷ ಪೂಜೆಗೆ ವ್ಯವಸ್ಥೆ ಮಾಡಿದ್ದು, ನಗರದ ಸರ್ವಜ್ಞ ಪಾರ್ಕಿನಲ್ಲಿರುವ ಶನೇಶ್ವರ ಸ್ವಾಮಿ ದೇವಾಲಯಕ್ಕೆ ಜನಸಾಗರವೇ ಹರಿದು ಬಂತು.

ಸ್ವಾಮಿಯನ್ನು ವಿಶೀಷ್ಟರೀತಿಯಲ್ಲಿ ಅಲಂಕರಿಸಿದ್ದು, ಮೊದಲ ಶನಿವಾರ ದರ್ಶನ ಪಡೆಯುವ ಉತ್ಸಾಹ,ಭಕ್ತಿಯಲ್ಲಿ ತೇಲಿಹೋದ ಭಕ್ತರು ಸರದಿ ಸಾಲಿನಲ್ಲಿ ನಿಂತು ದರ್ಶನ ಪಡೆದರು.

ಶ್ರೀನಿವಾಸ,ಶನೇಶ್ವರ ಸ್ವಾಮಿಯ ಜತೆಗೆ ನಗರ ಮತ್ತು ಜಿಲ್ಲೆಯಲ್ಲಿ ಶ್ರಾವಣ ಶನಿವಾರದ ಪೂಜೆ ಶ್ರೀರಾಮ, ಆಂಜನೇಯಸ್ವಾಮಿ ದೇವಾಲಯಗಳಲ್ಲಿಯೂ ಕಂಡು ಬಂತು. ಶನೇಶ್ವರ ಸ್ವಾಮಿಯ ದರ್ಶನ ಪಡೆದ ನಂತರ ಆಂಜನೇಯನ ದರ್ಶನ ಪಡೆಯಲೇಬೇಕು ಎಂಬ ಪ್ರತೀತಿ ಭಕ್ತರಲ್ಲಿ ಇರುವುದರಿಂದ ಹನುಮನ ದೇಗುಲಗಳು ಇಂದು ಭಕ್ತರಿಂದ ತುಂಬಿ ತುಳುಕುತ್ತಿದ್ದವು.

ನಗರದ ಕೋಟೆ ಪಂಚಮುಖಿ ಆಂಜನೇಯ, ಪಾಲಸಂದ್ರ ಭಕ್ತ ಹನುಮ, ಶಾರದಾಚಿತ್ರಮಂದಿರ ರಸ್ತೆಯ ವಕ್ಕಲೇರಿ ಆಂಜನೇಯಸ್ವಾಮಿ, ಬ್ರಾಹ್ಮಣರ ಬೀದಿಯ ದೊಡ್ಡ ಆಂಜನೇಯಸ್ವಾಮಿ, ಕುರುಬರಪೇಟೆ ಪಂಚಮುಖಿ ಹನುಮ, ಪಿಸಿ ಬಡಾವಣೆಯ ಕೋದಂಡರಾಮಸ್ವಾಮಿ,ಕಿಲಾರಿಪೇಟೆಯ ವೇಣುಗೋಪಾಲಸ್ವಾಮಿ, ಅಮ್ಮವಾರಿಪೇಟೆಯ ವರದರಾಜಸ್ವಾಮಿ ದೇವಾಲಯ ಸೇರಿದಂತೆ ಜಿಲ್ಲೆಯ ಗ್ರಾಮೀಣ ಭಾಗದಲ್ಲೂ ಹನುಮ, ಶ್ರೀನಿವಾಸನ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯಿತು.

ಚಿತ್ರ : ಕೋಲಾರದ ದೊಡ್ಡಪೇಟೆಯ ಶ್ರೀವೆಂಕಟರಮಣಸ್ವಾಮಿ ದೇವಾಲಯದಲ್ಲಿ ಸ್ವಾಮಿಯ ದರ್ಶನಕ್ಕೆ ಸಾಲುಗಟ್ಟಿ ನಿಂತಿರುವ ಭಕ್ತರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande