ಬಸವ ಸಂಸ್ಕೃತಿ ಅಭಿಯಾನದ ಅಂತಿಮ ಸಿದ್ಧತೆ ಪರಿಶೀಲಿಸಿದ ಸಚಿವ ಶಿವಾನಂದ ಪಾಟೀಲ
ವಿಜಯಪುರ, 31 ಆಗಸ್ಟ್ (ಹಿ.ಸ.) : ಆ್ಯಂಕರ್ : ಬಸವ ಜನ್ಮಭೂಮಿ ವಿಜಯಪುರ ಜಿಲ್ಲೆಯ ಬಸವವನಬಾಗೇವಾಡಿ ಪಟ್ಟಣದಿಂದ ಚಾಲನೆ ಪಡೆಯಲಿರುವ ಬಸವ ಸಂಸ್ಕೃತಿ ಅಭಿಯಾನಕ್ಕೆ ಕ್ಷಣ ಗಣನೆ ಆರಂಭಗೊಂಡಿದೆ. ಸೋಮವಾರ ಸೆ.1ರಂದು ಅಭಿಯಾನಕ್ಕೆ ಚಾಲನೆ ಪಡೆಯಲಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ಶಾಸಕರೂ ಆಗಿರುವ ಜವಳಿ, ಸಕ್ಕರೆ
ಬಸವ


ವಿಜಯಪುರ, 31 ಆಗಸ್ಟ್ (ಹಿ.ಸ.) :

ಆ್ಯಂಕರ್ : ಬಸವ ಜನ್ಮಭೂಮಿ ವಿಜಯಪುರ ಜಿಲ್ಲೆಯ ಬಸವವನಬಾಗೇವಾಡಿ ಪಟ್ಟಣದಿಂದ ಚಾಲನೆ ಪಡೆಯಲಿರುವ ಬಸವ ಸಂಸ್ಕೃತಿ ಅಭಿಯಾನಕ್ಕೆ ಕ್ಷಣ ಗಣನೆ ಆರಂಭಗೊಂಡಿದೆ.

ಸೋಮವಾರ ಸೆ.1ರಂದು ಅಭಿಯಾನಕ್ಕೆ ಚಾಲನೆ ಪಡೆಯಲಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ಶಾಸಕರೂ ಆಗಿರುವ ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರು ಅಂತಿಮ ಸಿದ್ಧತೆ ಪರಿಶೀಲಿಸಿದರು.

ಭಾನುವಾರ ಮಧ್ಯಾಹ್ನ ಪಟ್ಟಣದ ಸಿಬಿಎಸ್ ಶಾಲಾ ಆವರಣದಲ್ಲಿ ಅಭಿಯಾನ ವೇದಿಕೆ ಹಾಗೂ ಪ್ರಸಾದ ವ್ಯವಸ್ಥೆಯ ಅಂತಿಮ ಸಿದ್ಧತೆ ಪರಿಶೀಲಿಸಿದ ಸಚಿವರು, ಸಲಹೆ, ಸೂಚನೆ ನೀಡಿದರು.

ಬೈಲೂರಿನ ನಿಜಗುಣಾಂದ ಶ್ರೀಗಳು,

ಬಸವವನಬಾಗೇವಾಡಿ ವಿರಕ್ತಮಠದ ಸಿದ್ಧಲಿಂಗ ಶ್ರೀಗಳು, ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಮುಖಂಡರಾದ ಲೋಕನಾಥ ಅಗರವಾಲ, ಈರಣ್ಣ ಪಟ್ಟಣಶೆಟ್ಟಿ ಅಭಿಯಾನದ ಸಮಿತಿಗಳ ಪ್ರಮುಖರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande