ಶಿಬು ಸೊರೇನ್‌ ನಿಧನ : ರಾಜ್ಯ ಸಭೆ ಶ್ರದ್ಧಾಂಜಲಿ ; ಕಲಾಪ ಮುಂದೂಡಿಕೆ
ನವದೆಹಲಿ, 04 ಆಗಸ್ಟ್ (ಹಿ.ಸ.) : ಆ್ಯಂಕರ್ : ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಅವರ ನಿಧನಕ್ಕೆ ರಾಜ್ಯಸಭೆಯಲ್ಲಿ ಸೋಮವಾರ ಶ್ರದ್ಧಾಂಜಲಿ ಸಲ್ಲಿಸಿ, ಮೃತರ ಗೌರವಾರ್ಥ ಸದನದ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಯಿತು. ಸೋಮವಾರ ಬೆಳಿಗ್ಗೆ ರಾಜ್ಯಸಭೆಯ ಕಲಾಪ ಪ್ರಾರಂಭವಾದ ಬಳಿಕ ಉಪಸಭಾಪತಿ ಹರಿ
Condolences


ನವದೆಹಲಿ, 04 ಆಗಸ್ಟ್ (ಹಿ.ಸ.) :

ಆ್ಯಂಕರ್ : ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಅವರ ನಿಧನಕ್ಕೆ ರಾಜ್ಯಸಭೆಯಲ್ಲಿ ಸೋಮವಾರ ಶ್ರದ್ಧಾಂಜಲಿ ಸಲ್ಲಿಸಿ, ಮೃತರ ಗೌರವಾರ್ಥ ಸದನದ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಯಿತು.

ಸೋಮವಾರ ಬೆಳಿಗ್ಗೆ ರಾಜ್ಯಸಭೆಯ ಕಲಾಪ ಪ್ರಾರಂಭವಾದ ಬಳಿಕ ಉಪಸಭಾಪತಿ ಹರಿವಂಶ್ ಅವರು ಶಿಬು ಸೊರೇನ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ, ಎರಡು ನಿಮಿಷಗಳ ಮೌನಾಚರಣೆ ನಡೆಸಿದರು. ನಂತರ, ಸದನದ ಎಲ್ಲಾ ಸದಸ್ಯರು ಶ್ರದ್ಧಾಂಜಲಿ ಸಲ್ಲಿಸಿ ಕಲಾಪವನ್ನು ಮುಂದೂಡಿದರು.

ಶಿಬು ಸೊರೇನ್ ಮೂರು ಬಾರಿ ರಾಜ್ಯಸಭಾ ಸದಸ್ಯರಾಗಿದ್ದರೆ, ಕೇಂದ್ರದ ಯುಪಿಎ ಸರ್ಕಾರದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande