ಬೆಂಗಳೂರು-ಬೆಳಗಾವಿ ನೂತನ ʼವಂದೇ ಭಾರತ್‌ʼ ರೈಲು; ಆ.10ಕ್ಕೆ ಪ್ರಧಾನಿ ಹಸಿರು ನಿಶಾನೆ
ನವದೆಹಲಿ, 05 ಆಗಸ್ಟ್ (ಹಿ.ಸ.) : ಆ್ಯಂಕರ್ : ಬೆಂಗಳೂರು-ಬೆಳಗಾವಿ ನೂತನ ʼವಂದೇ ಭಾರತ್‌ʼ ರೈಲು ಸಂಚಾರ ಸೇರಿದಂತೆ ಮೂರು ವಂದೇ ಭಾರತ್‌ ರೈಲು ಸಂಚಾರಕ್ಕೆ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆ.10ರಂದು ಚಾಲನೆ ನೀಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಆ.10ರ ಭಾನುವಾರ ಕರ್ನಾಟಕ ಪ್ರವಾಸ ಕೈ
Train


ನವದೆಹಲಿ, 05 ಆಗಸ್ಟ್ (ಹಿ.ಸ.) :

ಆ್ಯಂಕರ್ : ಬೆಂಗಳೂರು-ಬೆಳಗಾವಿ ನೂತನ ʼವಂದೇ ಭಾರತ್‌ʼ ರೈಲು ಸಂಚಾರ ಸೇರಿದಂತೆ ಮೂರು ವಂದೇ ಭಾರತ್‌ ರೈಲು ಸಂಚಾರಕ್ಕೆ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆ.10ರಂದು ಚಾಲನೆ ನೀಡಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಆ.10ರ ಭಾನುವಾರ ಕರ್ನಾಟಕ ಪ್ರವಾಸ ಕೈಗೊಂಡ ವೇಳೆ ಬೆಂಗಳೂರು-ಬೆಳಗಾವಿ ವಂದೇ ಭಾರತ್‌ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾಜ್ಯದಲ್ಲಿ 3 ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಬೆಂಗಳೂರು-ಬೆಳಗಾವಿ, ನಾಗ್ಪುರದ ಅಜ್ನಿ-ಪೂನಾ ಹಾಗೂ ಅಮೃತಸರ-ಶ್ರೀ ಮಾತಾ ವೈಷ್ಣವೋದೇವಿ ಕಾರ್ತ ಮಧ್ಯೆ ನೂತನ ವಂದೇ ಭಾರತ್ ರೈಲುಗಳು ಸಂಚಾರ ಆರಂಭಿಸಲಿವೆ.

ಈ ಹಿಂದೆ ಸಚಿವ ಪ್ರಲ್ಹಾದ ಜೋಶಿ ಅವರು ಬೆಂಗಳೂರು-ಬೆಳಗಾವಿ ಮಧ್ಯೆ ನೂತನ ಒಂದೇ ಭಾರತ್‌ ರೈಲು ಸಂಚಾರ ಆರಂಭಿಸಲು ಪ್ರಧಾನಿ ಮೋದಿ ಮತ್ತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರನ್ನು ಒತ್ತಾಯಿಸಿದ್ದರು.

ಇದಕ್ಕೆ ಸ್ಪಂದಿಸಿದ ಪ್ರಧಾನಿ ಮೋದಿ ಅವರು ಭಾನುವಾರ ತಾವೇ ಖುದ್ದು ಈ ಹೊಸ ವಂದೇ ಭಾರತ್‌ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ.

ಈ ನೂತನ ವಂದೇ ಭಾರತ್‌ ರೈಲು ಬೆಳಗಾವಿಯಿಂದ ಬೆಳಗ್ಗೆ 5.20 ನಿಮಿಷಕ್ಕೆ ಹೊರಟು ಬೆಂಗಳೂರಿಗೆ ಮಧ್ಯಾಹ್ನ 1.50 ನಿಮಿಷಕ್ಕೆ ತಲುಪಲಿದೆ. ವಾಪಸ್‌ ಬೆಂಗಳೂರಿನಿಂದ ಮಧ್ಯಾಹ್ನ 2.20ಕ್ಕೆ ಹೊರಟು ರಾತ್ರಿ 10.40ಕ್ಕೆ ಬೆಳಗಾವಿ ತಲುಪಲಿದೆ.

ಈ ರೈಲು ಸಂಚಾರದಿಂದ ಬೆಂಗಳೂರು, ತುಮಕೂರು, ದಾವಣಗೆರೆ, ಹಾವೇರಿ, ಧಾರವಾಡ ಹಾಗೂ ಬೆಳಗಾವಿ ಮಧ್ಯೆ ಸಂಪರ್ಕ ಹೆಚ್ಚಲಿದ್ದು, ಈ ಭಾಗದ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande