ಡಿ.ದೇವರಾಜ ಅರಸು ಜನ್ಮ ದಿನಾಚರಣೆಗೆ ಸಿದ್ಧತೆ ಮಾಡಿಕೊಳ್ಳಿ : ಜಿಲ್ಲಾಧಿಕಾರಿ ಸುರೇಶ ಇಟ್ನಾಳ
ಕೊಪ್ಪಳ, 07 ಆಗಸ್ಟ್ (ಹಿ.ಸ.) : ಆ್ಯಂಕರ್ : ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಆಗಸ್ಟ್ 20 ರಂದು ಆಚರಿಸಲಾಗುವ ಡಿ.ದೇವರಾಜ ಅರಸು ರವರ 110ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸುರೇಶ ಬಿ. ಇಟ
ಡಿ.ದೇವರಾಜ ಅರಸು ಜನ್ಮ ದಿನಾಚರಣೆಗೆ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಸುರೇಶ ಇಟ್ನಾಳ


ಕೊಪ್ಪಳ, 07 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಆಗಸ್ಟ್ 20 ರಂದು ಆಚರಿಸಲಾಗುವ ಡಿ.ದೇವರಾಜ ಅರಸು ರವರ 110ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಹೇಳಿದರು.

ಅವರು ಗುರುವಾರ ಕೊಪ್ಪಳ ಜಿಲ್ಲಾಡಳಿತ ಭವನದ ಕೆಸ್ವಾನ್-2 ಸಭಾಂಗಣದಲ್ಲಿ ಡಿ.ದೇವರಾಜ ಅರಸು ರವರ ಜನ್ಮ ದಿನಾಚರಣೆಯ ಕುರಿತು ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಡಿ.ದೇವರಾಜ ಅರಸು ಜನ್ಮ ದಿನಾಚರಣೆಯ ಜಿಲ್ಲಾಮಟ್ಟದ ಕಾರ್ಯಕ್ರಮದ ಅಂಗವಾಗಿ ಮೆರವಣಿಗೆ ಸಾಗುವ ಮಾರ್ಗದ ರಸ್ತೆಗಳು ಹಾಗೂ ಸಾಹಿತ್ಯ ಭವನದ ಆವರಣವನ್ನು ಸ್ವಚ್ಛಗೊಳಿಸಬೇಕು. ಕುಡಿಯುವ ನೀರಿನ ವ್ಯವಸ್ಥೆಯನ್ನು ನಗರಸಭೆಯಿಂದ ಕೈಗೊಳ್ಳಬೇಕು. ವೇದಿಕೆ ಕಾರ್ಯಕ್ರಮ ಶಿμÁ್ಟಚಾರದಂತೆ ನಡೆಸಬೇಕು. ಮೆರವಣಿಗೆ ಸಾಗುವ ಮಾರ್ಗಕ್ಕೆ ಸೂಕ್ತ ಪೆÇೀಲಿಸ್ ಬಂದೋಬಸ್ತ್ ಒದಗಿಸಬೇಕು. ಡಿ.ದೇವರಾಜ ಅರಸ್ ಅವರ ಕುರಿತು ವಿಶೇಷ ಉಪನ್ಯಾಸದ ವ್ಯವಸ್ಥೆ ಮಾಡಬೇಕು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಇಲಾಖಾ ಮುಖ್ಯಸ್ಥರು ಹಾಗೂ ಸಿಬ್ಬಂದಿ ಕಡ್ಡಾಯ ಭಾಗವಹಿಸಬೇಕು ಎಂದರು.

ಡಿ.ದೇವರಾಜ ಅರಸು ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ., ಪಿ.ಯು.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ನಿಲಯಾರ್ಥಿಗಳನ್ನು ಗುರುತಿಸಿ ಸನ್ಮಾನ ಮಾಡುವುದು, ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಗೆ ಪ್ರಬಂಧ, ಭಾಷಣ, ರಸಪ್ರಶ್ನೆ, ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನ ವಿತರಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ನಾಗಮಣಿ ಅವರು ಮಾತನಾಡಿ, ಆಗಸ್ಟ್ 20ರಂದು ಬೆಳಿಗ್ಗೆ 8.30ಕ್ಕೆ ಡಿ.ದೇವರಾಜ ಅರಸು ಅವರ ಭಾವಚಿತ್ರದ ಮೆರವಣಿಗೆಯು ಶ್ರೀ ಗವಿಮಠದಿಂದ ಸಾಹಿತ್ಯ ಭವನದ ವರೆಗೆ ಗಡಿಯಾರ ಕಂಬದ ಮಾರ್ಗವಾಗಿ ನಡೆಯಲಿದೆ. ಬೆಳಿಗ್ಗೆ 10.30ಕ್ಕೆ ಸಾಹಿತ್ಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಸಲು ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಕೈಗೊಳ್ಳಲಾಗುತ್ತಿದೆ. ಕಾರ್ಯಕ್ರಮಕ್ಕೆ ಉಪನ್ಯಾಸಕರನ್ನು ಸಹ ಈಗಾಗಲೇ ಗುರುತಿಸಲಾಗಿದೆ. ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು ಹಾಗೂ ಜಯಂತಿ ಆಚರಣೆಯ ರೂಪರೇμÉಗಳನ್ನು ಸಭೆಗೆ ವಿವರಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಕರಿಯಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಕೊಪ್ಪಳ ತಾಲ್ಲೂಕು ಅಧಿಕಾರಿ ನಾಗರತ್ನ, ವಿಸ್ತರಣಾಧಿಕಾರಿ ರಮೇಶ ಹುಬ್ಬಳ್ಳಿ ಸೇರಿದಂತೆ ಇತರೆ ಅಧಿಕಾರಿಗಳು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande