ಮೈಸೂರು, 09 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕಾಂಗ್ರೆಸ್ ಭವನ ಎಂಬುದು ಹೆಸರಿಗಷ್ಟೇ ಭವನ ಇದ್ದಂತೆ, ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾಲಿಗೆ ಇದೊಂದು ದೇವಸ್ಥಾನ. ಪ್ರಜಾಪ್ರಭುತ್ವ ಉಳಿಸುವ ಸೌಧವಿದು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮೈಸೂರಿನಲ್ಲಿ ಕಾಂಗ್ರೆಸ್ ಭವನ ಕಟ್ಟಡ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,
ಪಕ್ಷದ ಕಾರ್ಯಕರ್ತರು ಭವನ ನಿರ್ಮಾಣಕ್ಕೆ ದೇಣಿಗೆಯನ್ನು ನೀಡಬೇಕು. ಒಂದು ಸಾವಿರ ರೂ. ದೇಣಿಗೆ ನೀಡಿದರೂ ಕಾಂಗ್ರೆಸ್ ಭವನದ ಕಟ್ಟಡಕ್ಕೆ ಕೊಡುಗೆ ಇರುತ್ತದೆ ಎಂಬ ಹೆಮ್ಮೆ ನಮಗಿರಲಿದೆ ಎಂದರು.
ಕಾಂಗ್ರೆಸ್ನಿಂದ ಆರು ಬಾರಿ ಶಾಸಕರಾಗಿರುವ ತನ್ವೀರ್ ಸೇಠ್ ಅವರು ಕಾಂಗ್ರೆಸ್ ಭವನ ನಿರ್ಮಿಸಲು ಭೂಮಿಯನ್ನು ದೇಣಿಗೆಯಾಗಿ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷನಾಗಿ ನಾನು ಅವರನ್ನು ಅಭಿನಂದಿಸುತ್ತೇನೆ ಎಂದರು.
ಮಹಾತ್ಮ ಗಾಂಧಿ ಅವರು ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿ ಶತಮಾನೋತ್ಸವ ಪೂರೈಸಿದ ಸವಿನೆನಪಿಗಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹಾಗೂ ಇತರೆಡೆ 100 ಕಚೇರಿ ನಿರ್ಮಿಸಲಾಗುತ್ತಿದೆ. ಪ್ರತಿ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಕಾಂಗ್ರೆಸ್ ಭವನ ನಿರ್ಮಿಸಲು ಬೆಂಬಲ ನೀಡಬೇಕು. ಈಗಾಗಲೇ ಸಚಿವರಾದ ಸಂತೋಷ್ ಲಾಡ್, ಶರಣ್ ಪ್ರಕಾಶ್ ಪಾಟೀಲ್, ಮದ್ದೂರು ಶಾಸಕರಾದ ಕೆಎಂ ಉದಯ್, ರೋಣ ಶಾಸಕರಾದ ಗುರುಪಾದಗೌಡ ಸಂಗನಗೌಡ ಪಾಟೀಲ್ ಅವರು ಕಾಂಗ್ರೆಸ್ ಭವನ ನಿರ್ಮಿಸಲು ದೇಣಿಗೆಯಾಗಿ ನೀಡಿದ್ದಾರೆ. ನಾನೂ ಕೂಡ ರಾಮನಗರದಲ್ಲಿ ಕಾಂಗ್ರೆಸ್ ಭವನ ನಿರ್ಮಿಸಲು ಜಾಗವನ್ನು ಕೊಟ್ಟಿದ್ದೇನೆ. ಕಾಂಗ್ರೆಸ್ ಶಾಸಕರು ಕಾಂಗ್ರೆಸ್ ಭವನ ಕಟ್ಟುವಲ್ಲಿ ಕೊಡುಗೆ ನೀಡುವಂತೆ ಕರೆ ನೀಡಿದರು
ಹಿಂದೂಸ್ತಾನ್ ಸಮಾಚಾರ್ / Rakesh Mahadevappa