ನೂತನ ಪಶು ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಸಚಿವ ಎಚ್. ಕೆ. ಪಾಟೀಲ ಶಂಕುಸ್ಥಾಪನೆ
ಗದಗ, 09 ಆಗಸ್ಟ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲಾ ಪಂಚಾಯತ್, ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಪಶು ಆಸ್ಪತ್ರೆ ಬೆಟಿಗೇರಿ ಸಂಸ್ಥೆಯಲ್ಲಿ ನೂತನ ಕಟ್ಟಡದ ಶಂಕುಸ್ಥಾಪನೆ ಯನ್ನು ಕಾನೂನು ನ್ಯಾಯ ಹಾಗೂ ಮಾನವ ಹಕ್ಕುಗಳು ಸಂಸದೀಯ ವ್ಯವಹಾರಗಳು ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ
ಪೋಟೋ


ಗದಗ, 09 ಆಗಸ್ಟ್ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲಾ ಪಂಚಾಯತ್, ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಪಶು ಆಸ್ಪತ್ರೆ ಬೆಟಿಗೇರಿ ಸಂಸ್ಥೆಯಲ್ಲಿ ನೂತನ ಕಟ್ಟಡದ ಶಂಕುಸ್ಥಾಪನೆ ಯನ್ನು ಕಾನೂನು ನ್ಯಾಯ ಹಾಗೂ ಮಾನವ ಹಕ್ಕುಗಳು ಸಂಸದೀಯ ವ್ಯವಹಾರಗಳು ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್. ಕೆ. ಪಾಟೀಲ ಅವರು ಶನಿವಾರ ಬೆಟಗೇರಿಯಲ್ಲಿ ಭೂಮಿ ಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು ಪಶು ಸಂಪತ್ತನ್ನು ಅಧಿಕಗೊಳಿಸಿ‌ ಅದರಿಂದ ಆರ್ಥಿಕ ಸ್ವಾವಲಂಬಿಗಳಾಗಲು ಪಶು ಆಸ್ಪತ್ರೆ ಸಹಕಾರಿಯಾಗಲಿದೆ. ಈ ಭಾಗದ ಸಾರ್ವಜನಿಕರು ಹೆಚ್ಚು ಹೆಚ್ಚು ಸದ್ಭಳಕೆ ಮಾಡಿಕೊಳ್ಳಲು ತಿಳಿಸಿದರು.

ಬೆಂಗಳೂರು ಕೆಎಂಎಫ್ ನಲ್ಲಿ ಹೆಚ್ಚು ಹಾಲು ಉತ್ಪಾದನೆಯಾಗುತ್ತದೆ. 1000 ಲೀಟರಿಗೂ ಹೆಚ್ಚು ಹಾಲು ಉತ್ಪಾದನೆ ಗುರಿಯನ್ನು ಸಾಧಿಸಿರುತ್ತದೆ. ನಮ್ಮ ಗದಗ ಬೆಟಿಗೇರಿಯಲ್ಲಿ ನೂತನ ಕಟ್ಟಡದ ಭೂಮಿ ಪೂಜೆ ರೈತರಿಗೆ ಭರವಸೆ ಮೂಡಿಸಿದೆ ಎಂದರು. ಪಶುಪಾಲನೆಯಲ್ಲಿ ಮತ್ತು ಹಾಲು ಉತ್ಪಾದನೆಯನ್ನು ಹೆಚ್ಚಿಸಲು ಈ ಸಂದರ್ಭದಲ್ಲಿ ನಮ್ಮಿಂದ ಸಹಾಯ ಸಹಕಾರ ಮಾಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ ಬಬರ್ಜಿ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಕೆ ಮಂದಾಲಿ, ಲಕ್ಷ್ಮವ್ವ ಬಜಂತ್ರಿ, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ ಆರ್, ಡಾ ಎಚ್ ಬಿ ಹುಲಗನ್ನವರ, ಡಾ ಎಚ್ ವೈ ಹೊನ್ನಿ ನಾಯ್ಕರ್, ಡಾ. ಹೀರಲಾಲ ಎನ್ ಜನಗಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande