ಹೊಸಪೇಟೆ , 10 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿನಲ್ಲಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 31 ರಂದು ಕೊನೆಯ ದಿನಾಂಕವಾಗಿದೆ.
ಆಸಕ್ತ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಅರಿವು ಶೈಕ್ಷಣಿಕ ಸಾಲ ಯೋಜನೆಯ ಅರ್ಹತೆಗಳು : ಈ ಯೋಜನೆಯಲ್ಲಿ ಸಿಇಟಿ ಮತ್ತು ಎನ್ಇಇಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿಹೆಚ್ಡಿನಲ್ಲಿ ವ್ಯಾಸಂಗ ಮಾಡುವ ಆರ್ಯವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ 1 ಲಕ್ಷ ರೂ ಸಾಲವನ್ನು ಶೇ.2 ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು.
ವ್ಯಾಸಂಗ ಪೂರ್ಣಗೊಂಡ ನಂತರ 04 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6 ಲಕ್ಷ ರೂ ಮಿತಿಯೊಳಗಿರಬೇಕು.
ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು: ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ 'ನಮೂನೆ-ಜಿ' ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು), ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು.
ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಶೇಷಚೇತನರಿಗೆ ಶೇ.5 ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಇಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ : ನಿಗಮದ ಸಹಾಯವಾಣಿ ಸಂಖ್ಯೆ. 08392-267038 ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ. ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕರ ಕಚೇರಿ ವಿಳಾಸಗಳನ್ನು ಹಾಗೂ ಎಲ್ಲಾ ವಿವರಗಳನ್ನು ವೆಬ್ಸೈಟ್ ಮೂಲಕ ತಿಳಿಯಬಹುದಾಗಿದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್