ನೂತನ ಉಪ ರಾಷ್ಟ್ರಪತಿಗೆ ಕಾಂಗ್ರೆಸ್ ಅಭಿನಂದನೆ
ನವದೆಹಲಿ, 10 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಹೊಸದಾಗಿ ಆಯ್ಕೆಯಾದ ದೇಶದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅಭಿನಂದನೆ ಸಲ್ಲಿಸಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸನಲ್ಲಿ ಪ್ರತಿಕ್ರಿಯಿಸಿದ ಅವರು, ರಾಧಾಕೃಷ್ಣನ್ ಅವರ ಆಯ್ಕೆ ದೇಶ
Jairam ramesh


ನವದೆಹಲಿ, 10 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಹೊಸದಾಗಿ ಆಯ್ಕೆಯಾದ ದೇಶದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅಭಿನಂದನೆ ಸಲ್ಲಿಸಿದ್ದಾರೆ.

ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸನಲ್ಲಿ ಪ್ರತಿಕ್ರಿಯಿಸಿದ ಅವರು, ರಾಧಾಕೃಷ್ಣನ್ ಅವರ ಆಯ್ಕೆ ದೇಶದ ಸಂವಿಧಾನಾತ್ಮಕ ಸಂಸ್ಥೆಗಳ ಬಲವರ್ಧನೆಗೆ ಸಹಕಾರಿಯಾಗಲಿ ಎಂದು ಶುಭಾಶಯ ಕೋರಿದ್ದಾರೆ.

ಜೈರಾಮ್ ರಮೇಶ್ ಅವರು 1952ರ ಮೇ 16ರಂದು ನಡೆದ ರಾಜ್ಯ ಸಭೆಯ ಉದ್ಘಾಟನಾ ಸಮಾರಂಭದಲ್ಲಿ ಡಾ. ರಾಧಾಕೃಷ್ಣನ್ ನೀಡಿದ ಪ್ರಭಾವಶಾಲಿ ಭಾಷಣವನ್ನು ಉಲ್ಲೇಖಿಸಿ, ಅದರಲ್ಲಿ ಪ್ರತಿಧ್ವನಿಸಿದ ಸಂವಿಧಾನಿಕ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿವೆ ಎಂದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande