ವಿಜಯಪುರ, 10 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ಕಾಯಚಿಕಿತ್ಸೆ ವಿಭಾಗದ ವತಿಯಿಂದ ಇಂದಿನಿಂದ ಸೆಪ್ಟೆಂಬರ್ 17ರ ವರೆಗೆ ಆರು ದಿನಗಳ ಕಾಲ ಪುರುಷರಲ್ಲಿ ಸಂತಾನ ಹೀನತೆ ಮತ್ತು ಪುರುಷರ ವೀರ್ಯದಲ್ಲಿನ ಸಮಸ್ಯೆಗೆ ಉಚಿತ ತಪಾಸಣೆ ಮತ್ತು ರಿಯಾಯಿತಿ ದರದಲ್ಲಿ ಚಿಕಿತ್ಸೆ ಶಿಬಿರ ನಡೆಯಲಿದೆ.
ಈ ಸಮಸ್ಯೆ ಎದುರಿಸುತ್ತಿರುವ ಪುರುಷರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ ನಂ. 8073518596 ಕ್ಕೆ ಸಂಪರ್ಕಿಸಬಹುದಾಗಿದೆ, ಎಂದು ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande