ಶುಲ್ಕ ಮರು ಪಾವತಿ ಹಾಗೂ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
ವಿಜಯಪುರ, 11 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಎಸ್‍ಎಸ್‍ಎಲ್‍ಸಿ ನಂತರದ ಉನ್ನತ ಶಿಕ್ಷಣ, ವೃತ್ತಿ ಶಿಕ್ಷಣ, ತಾಂತ್ರಿಕ ಶಿಕ್ಷಣ ಹಾಗೂ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಹಾಗೂ ವಿಕಲ ಚೇತನರಿಗೆ ವಿವಾಹದಲ್ಲಿ ಪ್ರೋತ್ಸಾಹಧನಕ್ಕಾಗಿ ಜಿಲ್ಲಾ ವಿಕ
ಶುಲ್ಕ ಮರು ಪಾವತಿ ಹಾಗೂ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ


ವಿಜಯಪುರ, 11 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಎಸ್‍ಎಸ್‍ಎಲ್‍ಸಿ ನಂತರದ ಉನ್ನತ ಶಿಕ್ಷಣ, ವೃತ್ತಿ ಶಿಕ್ಷಣ, ತಾಂತ್ರಿಕ ಶಿಕ್ಷಣ ಹಾಗೂ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಹಾಗೂ ವಿಕಲ ಚೇತನರಿಗೆ ವಿವಾಹದಲ್ಲಿ ಪ್ರೋತ್ಸಾಹಧನಕ್ಕಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಸೆಪ್ಟೆಂಬರ್ 30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ಜಗದೀಶ ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗು ವಿಜಯಪುರ ಜಿಲ್ಲಾ ಸಂಯೋಜಕರಾದ ಪ್ರತಿಭಾ ಮಾದರ ಮೊ: 9606151149, ವಿಜಯಪುರ ತಾಲೂಕ ಪಂಚಾಯತಿಯ ಸಂಯೋಜಕರಾದ ರವಿ ರಾಠೋಡ ಮೊ: 9035553337, ಇಂಡಿ ತಾಲೂಕ ಪಂಚಾಯತಿಯ ಸಂಯೋಜಕರಾದ ಪರಶುರಾಮ ಭೋಸಲೆ ಮೊ: 9972441464, ಸಿಂದಗಿ ತಾಲೂಕ ಪಂಚಾಯತಿಯ ಸಂಯೋಜಕರಾದ ಮೊ: ಮುತ್ತುರಾಜ ಸಾತಿಹಾಳ ಮೊ: 9980019635, ಮುದ್ದೇಬಿಹಾಳ ತಾಲೂಕ ಪಂಚಾಯತಿಯ ಸಂಯೋಜಕರಾದ ಎಸ್.ಕೆ.ಘಾಟಿ ಮೊ: 9740682979 ಹಾಗೂ ಬಸವನ ಬಾಗೇವಾಡಿ ತಾಲೂಕ ಪಂಚಾಯತಿಯ ಸಂಯೋಜಕರಾದ ಶೀವಲೀಲಾ ಬಿರಾದಾರ ಮೊ: 8722135660ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande