ವಿಜಯಪುರ, 14 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸ್ಲಿಂ ಆಗಲು ನಾನು ಮೊದಲೇ ಹೇಳಿದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ವಿಜಯಪುರದಲ್ಲಿ ಮಾತನಾಡಿದ ಅವರು, ಮುಸ್ಲಿಂ ಕನ್ವರ್ಟ ಆಗಿದ್ದೇನೆ ಅಂದುಕೊಳ್ಳಿ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
ಅವರಿಗೆ ಮುಸ್ಲಿಂ ಆಗಲು ಮೊದಲೇ ಹೇಳಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಯತ್ನಾಳ, ತಿರುಗೇಟು ನೀಡಿದರು. ಅವರು ಮತಾಂತರ ಆಗಲಿ, ಮುಂದಿನ ದಿನಗಳಲ್ಲಿ ಜನತೆ ಬುದ್ಧಿ ಕಲಿಸುತ್ತಾರೆ ಎಂದು ಕಿಡಿಕಾರಿದರು. ಅಲ್ಲದೇ, 2028ಕ್ಕೆ ಬರುವ ಚುನಾವಣೆಯಲ್ಲಿ ಜನರು ಹೇಳುತ್ತಾರೆ. ಅದಕ್ಕಾಗಿ ಅಲ್ಪಸಂಖ್ಯಾತರ ಮತ ಮಾತ್ರ ತೆಗೆದುಕೊಳ್ಳಲಿ ಎಂದು ಸವಾಲ್ ಹಾಕಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande