ಹಾವೇರಿ, 17 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕೇಂದ್ರ ಸರ್ಕಾರ ಜನಗಣತಿ ಜೊತೆಗೆ ಜಾತಿ ಗಣತಿ ಮಾಡುವುದಾಗಿ ಹೇಳಿದೆ. ಅಲ್ಲಿವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಯಬೇಕು, ಯಾರನ್ನೋ ಮೆಚ್ಚಿಸಲು ಸಮೀಕ್ಷೆ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ಸಮೀಕ್ಷೆ ಮಾಡುವ ಅಧಿಕಾರನೇ ಇಲ್ಲ. ಸ್ಯಾಂಪಲ್ ಸರ್ವೆ ಮಾಡುವ ಅಧಿಕಾರ ಇದೆ. ಕೇಂದ್ರ ಸಮೀಕ್ಷಾ ಕಾಯಿದೆ ಪ್ರಕಾರ ರಾಜ್ಯ ಸರ್ಕಾರಕ್ಕೆ ಮನೆ ಮನೆಗೆ ಹೋಗಿ ಸರ್ವೆ ಮಾಡುವ ಅಧಿಕಾರ ಇಲ್ಲ. ಇವರು ಸಮೀಕ್ಷೆ ಹೆಸರಿನಲ್ಲಿ ಹಲವಾರು ಗೊಂದಲ ಸೃಷ್ಟಸಿದ್ದಾರೆ. ವೀರಶೈವ ಲಿಂಗಾಯತ ಅಂತ ಒಂದು ಜಾತಿ ಸೃಷ್ಟಿ ಮಾಡಿದಾರೆ. ಲಿಂಗಾಯತ ವೀರಶೈವ ಅಂತ ಒಂದು ಸೃಷ್ಟಿ ಮಾಡಿದ್ದಾರೆ. ಪ್ರತಿ ಸಮುದಾಯದಲ್ಲಿ ಇಪ್ಪೈತ್ತೈದರಿಂದ ಮೂವತ್ತು ಹೊಸ ಉಪ ಪಂಗಡಗಳನ್ನು ಸೃಷ್ಟಿ ಮಾಡಿದ್ದಾರೆ ಎಂದರು.
ಕನ್ವರ್ಟೆಡ್ ಕ್ರಿಶ್ಚಿಯನ್ ಅಂತ ಒಂದು ಪ್ರತ್ಯೇಕ ಕಾಲಂ ಮಾಡಿದ್ದಾರೆ. ಎಲ್ಲಾ ಸಮಾಜದಲ್ಲಿ ಕನ್ವರ್ಟೆಡ್ ಕ್ರಿಶ್ಚಿಯನ್ ಇರುವ ರೀತಿಯಲ್ಲಿ ಮಾಡಿದ್ದಾರೆ. ಸಂವಿಧಾನದಲ್ಲಿ ಕನ್ವರ್ಟೆಡ್ ಗೆ ಯಾವುದೇ ಕಾಲಂ ಇಲ್ಲ. ಇವರು ಸಮಾಜ ಒಡೆಯೋದಲ್ಲ, ಸಮಾಜ ಚೂರು ಚೂರು ಮಾಡಿದ್ದಾರೆ. ಇದು ಸದುದ್ದೇಶದಿಂದ ಕೂಡಿಲ್ಲ, ರಾಜಕೀಯ ಉದ್ದೇಶದಿಂದ ಕೂಡಿದೆ ಇದರ ಬದಲಾವಣೆ ಆಗಬೇಕು. ಕೇಂದ್ರ ಸರ್ಕಾರ ಈಗಾಗಲೇ ಸಮೀಕ್ಷೆ ಮಾಡುವುದಾಗಿ ಹೇಳಿದೆ. ಅಲ್ಲಿವರೆಗೆ ಕಾಯಬೇಕು, ಯಾರನ್ನೋ ಮೆಚ್ಚಿಸಲು ಸಿಎಂ ಸಮೀಕ್ಷೆ ಮಾಡಬಾರದು. ಮತಾಂತರ ನಿಷೇಧ ಕಾನೂನು ಕರ್ನಾಟಕದಲ್ಲಿದೆ, ನಮ್ಮ ಸರ್ಕಾರದಲ್ಲೇ ಕಾಯ್ದೆ ತಿದ್ದುಪಡಿ ಮಾಡಿದ್ದೇವೆ. ಒತ್ತಾಯ ಪೂರ್ವಕವಾಗಿ ಮತಾಂತರ, ಆಮಿಷ ಪೂರ್ವಕ ಮತಾಂತರಕ್ಕೆ ಯಾವಾಗಲೂ ನಿಷೇಧ ಇದ್ದೇ ಇದೆ. ಕಣ್ಣು ಮುಚ್ಚಿಕೊಂಡು ದಾರಿ ತಪ್ಪಿಸುವ ಕೆಲಸ ಇವರು ಮಾಡುತ್ತಿದಾರೆ ಎಂದು ಆರೋಪಿಸಿದರು.
ಕುರುಬ ಸಮಾಜವನ್ನು ಎಸ್ ಟಿ ಸೇರಿಸುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರ ಎಲ್ಲಾ ಸಮುದಾಯಗಳ ವಿಶ್ವಾಸ ತೆಗೆದುಕೊಳ್ಳಬೇಕು. ನಾನು ಸಿಎಂ ಆಗಿದ್ದಾಗ ವಾಲ್ಮೀಕಿ ಸಮಾಜಕ್ಕೆ ಮೀಸಲಾತಿಯನ್ನು ಶೇ 3 ರಿಂದ ಶೇ 7% ಹೆಚ್ಚಳ ಮಾಡಿದೆ. ಎಸ್ ಸಿ ಗೆ ಶೇ 15 ರಿಂದ ಶೇ 17 ಕ್ಕೆ ಹೆಚ್ಚಳ ಮಾಡಿದ್ದೇನೆ. ಈಗ ಅದರ ಪ್ರಕಾರ ನಡೆದಿದೆ. ಮುಂದೆ ಕೇಂದ್ರ ಸರ್ಕಾರ ಸಮೀಕ್ಷೆ ಮಾಡಲಿದೆ. ಅದರ ಆಧಾರದ ಮೇಲೆ ಜನಸಂಖ್ಯೆ ಗೊತ್ತಾಗುತ್ತದೆ. ಅದರ ಆಧಾರದ ಮೇಲೆ ಮುಂದೆ ನಿರ್ಧಾರ ಆಗುತ್ತದೆ ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa