ನವದೆಹಲಿ, 18 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ ಆರೋಪಗಳನ್ನು ಚುನಾವಣಾ ಆಯೋಗ ಖಂಡಿಸಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ರಾಹುಲ್ ಗಾಂಧಿ ಮಾಡಿದ ಆರೋಪಗಳು ಸುಳ್ಳು ಮತ್ತು ಆಧಾರರಹಿತವಾಗಿವೆ ಎಂದು ಆಯೋಗ ಸ್ಪಷ್ಟಪಡಿಸಿದೆ.
ಆಯೋಗದ ಪ್ರಕಾರ, ಯಾವುದೇ ಸಾಮಾನ್ಯ ನಾಗರಿಕನಿಗೂ ಆನ್ಲೈನ್ ಮೂಲಕ ಯಾರ ಹೆಸರನ್ನೂ ಮತದಾರರ ಪಟ್ಟಿಯಿಂದ ಅಳಿಸಲು ಸಾಧ್ಯವಿಲ್ಲ. ಅಲ್ಲದೆ, ಸಂಬಂಧಿಸಿದ ವ್ಯಕ್ತಿಗೆ ಕೇಳುವ ಅವಕಾಶ ನೀಡದೆ ಮತಗಳನ್ನು ತೆಗೆದುಹಾಕುವುದು ಸಾಧ್ಯವಿಲ್ಲ.
ರಾಹುಲ್ ಗಾಂಧಿ ಪತ್ರಿಕಾಗೋಷ್ಠಿಯಲ್ಲಿ, “ಕರ್ನಾಟಕದ ಒಂದು ವಿಧಾನಸಭಾ ಕ್ಷೇತ್ರದಿಂದ 6 ಸಾವಿರಕ್ಕೂ ಹೆಚ್ಚು ಜನರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ” ಎಂದು ಆರೋಪಿಸಿದ್ದರು. ಆದರೆ ಇದನ್ನು ಆಯೋಗ ತಳ್ಳಿಹಾಕಿದೆ.
ಆಯೋಗ 2023ರಲ್ಲಿ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಕೆಲವು ಮತ ಅಳಿಸುವ ಪ್ರಯತ್ನಗಳನ್ನು ಉಲ್ಲೇಖಿಸಿ, ಅದರ ಬಗ್ಗೆ ತನಿಖೆಗೆ ತಾನೇ ಎಫ್ಐಆರ್ ದಾಖಲಿಸಿತ್ತು ಎಂದು ತಿಳಿಸಿದೆ. ಅಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಆರ್. ಪಾಟೀಲ್ ಗೆದ್ದಿದ್ದರು. 2018ರಲ್ಲಿ ಆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಸುಭಾಶ ಗುತ್ತೇದಾರ್ ಆಯ್ಕೆಯಾಗಿದ್ದರು ಎಂದು ಆಯೋಗ ನೆನಪಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa