ಕನ್ನಡದಲ್ಲಿ 6ನೇ ವಿಜ್ಞಾನ, ತಂತ್ರಜ್ಞಾನ ಸಮ್ಮೇಳನಕ್ಕೆ ನಾಳೆ ಚಾಲನೆ
ರಾಯಚೂರು, 19 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಇವರ ಸಹಯೋಗದಲ್ಲಿ ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಜಗಜ್ಯೋತಿ ಬಸವೇಶ್ವರ ಪ್ರೇಕ್ಷಾಗೃಹದಲ್ಲಿ ಸೆಪ್ಟೆಂಬರ್ 19ರಂದು ಬೆಳಗ್ಗೆ 10
ಕನ್ನಡದಲ್ಲಿ 6ನೇ ವಿಜ್ಞಾನ, ತಂತ್ರಜ್ಞಾನ ಸಮ್ಮೇಳನಕ್ಕೆ ನಾಳೆ ಚಾಲನೆ


ರಾಯಚೂರು, 19 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಇವರ ಸಹಯೋಗದಲ್ಲಿ ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಜಗಜ್ಯೋತಿ ಬಸವೇಶ್ವರ ಪ್ರೇಕ್ಷಾಗೃಹದಲ್ಲಿ ಸೆಪ್ಟೆಂಬರ್ 19ರಂದು ಬೆಳಗ್ಗೆ 10 ಗಂಟೆಗೆ ಕನ್ನಡದಲ್ಲಿ 6ನೇ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನದ ಉದ್ಘಾಟನಾ ಸಮಾರಂಭ ನಡೆಯಲಿದೆ.

ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ಕರ್ನಾಟಕ ವಿಧಾನ ಪರಿಷತ್ತು ಸಭಾ ನಾಯಕರಾದ ಎನ್.ಎಸ್.ಬೋಸರಾಜು ಅವರು ಕಾರ್ಯಕ್ರಮ ಉದ್ಘಾಟಿಸುವರು. ಸ್ಮರಣ ಸಂಚಿಕೆಯ ಮುಖಪುಟವನ್ನು ಸಂಸದರಾದ ಜಿ. ಕುಮಾರ ನಾಯಕ ಅವರು ಬಿಡುಗಡೆ ಮಾಡುವರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಅಧ್ಯಕ್ಷರಾದ . ರಾಜಾಸಾಬ್ ಎ.ಎಚ್., ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಡಾ. ಏಕ್‍ರೂಪ್ ಕೌರ್, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನಿರ್ದೇಶಕರಾದ ಸದಾಶಿವ ಪ್ರಭು ಬಿ. ಅವರು ಆಗಮಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ. ಶಿವರಾಜ ಎಸ್.ಪಾಟೀಲ್ ಅವರು ವಹಿಸಲಿದ್ದಾರೆ.

ಗೌರವ ಉಪಸ್ಥಿತಿಯನ್ನು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಎಂ. ಹನುಮಂತಪ್ಪ, ವಿಧಾನ ಪರಿಷತ್ ಶಾಸಕರು ಹಾಗೂ ಮಾನ್ಯ ವ್ಯವಸ್ಥಾಪನಾ ಮಂಡಳಿ ಸದಸ್ಯರಾದ ಶರಣಗೌಡ ಪಾಟೀಲ್ ಬಯ್ಯಾಪುರ, ಮಾಜಿ ಶಾಸಕರು ಹಾಗೂ ಮಾನ್ಯ ವ್ಯವಸ್ಥಾಪನಾ ಮಂಡಳಿ ಸದಸ್ಯರಾದ ಬಸನಗೌಡ ಬ್ಯಾಗವಾಟ, ವ್ಯವಸ್ಥಾಪನಾ ಮಂಡಳಿ ಸದಸ್ಯರಾದ ಡಿ. ಮಲ್ಲಿಕಾರ್ಜುನ, ಮಲ್ಲೇಶ ಕೊಲಿಮಿ, ಮಧುಸೂದನ ರೆಡ್ಡಿ, ತಿಮ್ಮಣ್ಣ ಸೋಮಪ್ಪ ಚಾವಡಿ, ಡೀನ್ ಡಾ. ಕೆ. ನಾರಾಯಣರಾವ್, ಕುಲಸಚಿವರು ಹಾಗೂ ಮಾನ್ಯ ವ್ಯವಸ್ಥಾಪನಾ ಮಂಡಳಿ ಸದಸ್ಯ ಕಾರ್ಯದರ್ಶಿಗಳಾದ ಶರಣಬಸಪ್ಪ ಕೋಟೆಪ್ಪಗೋಳ, ಕ.ವಿ.ತಂ. ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ಆನಂದ ಆರ್. ಅವರು ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಕೃಷಿ ವಿಶ್ವವಿದ್ಯಾಲಯದ ಕೀಟಶಾಸ್ತ್ರ ವಿಭಾಗದ ಮುಖ್ಯಸ್ಥರು ಮತ್ತು ಸಮ್ಮೇಳನದ ಸಂಯೋಜಕರು ಹಾಗೂ ಪ್ರಾಧ್ಯಾಪಕರಾದ ಡಾ.ಎ.ಜಿ.ಶ್ರೀನಿವಾಸ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande