ಸೂಕ್ಷ್ಮ ನೀರಾವರಿ ಯೋಜನೆಯಡಿ ಸ್ಪ್ರಿಂಕ್ಲರ್ ವಿತರಣೆ : ರೈತರಿಂದ ಅರ್ಜಿ ಆಹ್ವಾನ
ಕೊಪ್ಪಳ, 19 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : 2025-26ನೇ ಸಾಲಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲೊಂದಾದ PM-RKVY-PDMC ಯೋಜನೆಯ ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕವನ್ನು(ಸ್ಪ್ರಿಂಕ್ಲರ್) ಶೇ.90 ರಷ್ಟು ಸಹಾಯಧನದಲ್ಲಿ ವಿತರಿಸಲಾಗುತ್ತಿದ್ದು,
ಸೂಕ್ಷ್ಮ ನೀರಾವರಿ ಯೋಜನೆಯಡಿ ಸ್ಪ್ರಿಂಕ್ಲರ್ ವಿತರಣೆ : ರೈತರಿಂದ ಅರ್ಜಿ ಆಹ್ವಾನ


ಕೊಪ್ಪಳ, 19 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : 2025-26ನೇ ಸಾಲಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲೊಂದಾದ PM-RKVY-PDMC ಯೋಜನೆಯ ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕವನ್ನು(ಸ್ಪ್ರಿಂಕ್ಲರ್) ಶೇ.90 ರಷ್ಟು ಸಹಾಯಧನದಲ್ಲಿ ವಿತರಿಸಲಾಗುತ್ತಿದ್ದು, ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ರೈತರು ಹೊಂದಿರುವ ಹಿಡುವಳಿಗನುಗುಣವಾಗಿ ಗರಿಷ್ಠ 5 ಹೆಕ್ಟೆರ್‍ವರೆಗೆ ಸರ್ಕಾರದಿಂದ ಸಹಾಯಧನ ಪಡೆಯಲು ಅವಕಾಶವಿರುತ್ತದೆ. ಯೋಜನೆಯಡಿ ಎಲ್ಲಾ ವರ್ಗದ ರೈತರಿಗೆ ಮೊದಲು 2 ಹೆಕ್ಟೆರ್ ಪ್ರದೇಶದವರೆಗೆ ಶೇ.90 ಮತ್ತು 2 ಹೆಕ್ಟೆರ್ ನಂತರದ ಪ್ರದೇಶಕ್ಕೆ ಶೇ.45 ರಷ್ಟು ಸಹಾಯಧನ ಪಡೆಯಬಹುದಾಗಿದೆ. ಮುಂದುವರೆದು 2 ಹೆಕ್ಟೆರ್‍ಗೆ ಸಂಬಂಧಿಸಿದಂತೆ ಈಗಾಗಲೇ 1 ಹೆಕ್ಟೆರ್‍ಗೆ ಸಹಾಯಧನ ಪಡೆದಿದ್ದಲ್ಲಿ ಅಂತಹ ರೈತರಿಗೆ ಬಾಕಿ 1 ಹೆಕ್ಟೆರ್‍ಗೆ ಶೇ.90 ರಷ್ಟು ಸಹಾಯಧನ ಪಡೆಯಬಹುದಾಗಿರುತ್ತದೆ.

ಈಗಾಗಲೇ 2025-26ನೇ ಸಾಲಿನ ಕ್ರಿಯಾ ಯೋಜನೆಯು ಕೇಂದ್ರ ಕಚೇರಿಯಿಂದ ಅನುಮೋದನೆಗೊಂಡಿದ್ದು, ಜೇಷ್ಠತಾ ಆಧಾರದ ಮೇಲೆ ಸರ್ಕಾರದಿಂದ ಸಹಾಯಧನದಡಿ ಸ್ಪ್ರಿಂಕ್ಲರ್ ಪಡೆಯುವ ಆಸಕ್ತ ರೈತರು ತಮಗೆ ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿಯೊಂದಿಗೆ ಪಹಣಿ, ಆಧಾರ್ ಕಾರ್ಡ್ ಪ್ರತಿ, ಎಫ್‍ಐಡಿ ಸಂಖ್ಯೆ, ನೀರಾವರಿ ದೃಢೀಕರಣ ಪ್ರಮಾಣ ಪತ್ರ(ಕಡ್ಡಾಯ), ಛಾಪಾ ಕಾಗದದ ಮೇಲೆ ಮುಚ್ಚಳಿಕೆ ಪತ್ರ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಇತ್ತೀಚಿನ 2 ಪಾಸ್‍ಪೋರ್ಟ್ ಅಳತೆಯ ಭಾವಚಿತ್ರಗಳು, ಜಾತಿ ಪ್ರಮಾಣ ಪತ್ರ(ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಾಗಿದ್ದಲ್ಲಿ ಮಾತ್ರ) ಸಲ್ಲಿಸಬೇಕು.

ಎಲ್ಲಾ ವರ್ಗದ ರೈತರಿಗೆ ಮಾರ್ಗಸೂಚಿ ಪ್ರಕಾರ ಒಮ್ಮೆ ಸೂಕ್ಷ್ಮ ನೀರಾವರಿ ಘಟಕವನ್ನು ಸಹಾಯಧನದಡಿ ಪಡೆದ ನಂತರ ಅಂತಹ ಫಲಾನುಭವಿಗಳು 7 ವರ್ಷಗಳವರೆಗೆ ಪುನಃ ಸಹಾಯಧನ ಪಡೆಯಲು ಅವಕಾಶವಿರುವುದಿಲ್ಲ ಎಂದು ಕೊಪ್ಪಳದ ಉಪ ಕೃಷಿ ನಿರ್ದೇಶಕರು-1 ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande