ಕೊಪ್ಪಳ, 19 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕೊಪ್ಪಳ ಪ್ರಾದೇಶಿಕ ಕೇಂದ್ರದಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಪ್ರಥಮ ಸ್ನಾತಕ ಮತ್ತು ಸ್ನಾತಕೋತ್ತರ ಶಿಕ್ಷಣ ಕ್ರಮಗಳಿಗೆ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸಾಂಪ್ರದಾಯಿಕವಾಗಿ ಕಾಲೇಜಿಗೆ ತೆರಳದೇ ಮನೆಯಲ್ಲೇ ಕುಳಿತುಕೊಂಡು, ಯಾವುದೇ ಸರ್ಕಾರಿ ಅರೆಸರ್ಕಾರಿ ಇಲಾಖೆಗಳಲ್ಲಿ ಕಾರ್ಯವನ್ನು ನಿರ್ವಹಿಸುತ್ತಾ ದೂರಶಿಕ್ಷಣದ ವ್ಯವಸ್ಥೆಯಡಿ ಶಿಕ್ಷಣ ಪಡೆಯಲು ಈ ಭಾಗದ ಆಸಕ್ತ ವಿದ್ಯಾರ್ಥಿ ಮತ್ತು ಪೋಷಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಕರ್ನಾಟಕ ರಾಜ್ಯಮುಕ್ತ ವಿಶ್ವವಿದ್ಯಾನಿಲಯವು ತನ್ನದೇ ಆದ ಪ್ರಾದೇಶಿಕ ಕೇಂದ್ರವನ್ನು ನೂತನವಾಗಿ ಕೊಪ್ಪಳದಲ್ಲಿ ಪ್ರಾರಂಭಿಸಿರುತ್ತದೆ.
ಕಛೇರಿಯು ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಕಾರ್ಯಾಲಯದ ಕಟ್ಟಡದ ಮೊದಲನೇ ಮಹಡಿ, ಗೋವನಕೊಪ್ಪ ಆಸ್ಪತ್ರೆ ಎದುರಿಗೆ, ಹೊಸಪೇಟೆ ರಸ್ತೆ ಇಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕ ರಾಜ್ಯದಲ್ಲಿ ದೂರಶಿಕ್ಷಣದ ಮೂಲಕ ಶಿಕ್ಷಣವನ್ನು ನೀಡುತ್ತಿರುವ ಏಕೈಕ ವಿಶ್ವವಿದ್ಯಾನಿಲಯವಾಗಿದೆ. ಈಗಾಗಲೇ 2024-25ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಯ ಪ್ರವೇಶಾತಿಯು ಪ್ರಾರಂಭವಾಗಿರುತ್ತದೆ.
ಪ್ರಥಮ ಬಿ.ಎ/ಬಿ.ಕಾಂ/ಬಿ.ಎಸ್ಸಿ, ಬಿ.ಲಿಬ್ ಮತ್ತು ಐ.ಎಸ್ಸಿ, ಬಿ.ಸಿ.ಎ, ಬಿ.ಬಿ.ಎ ಮತ್ತು ಬಿ.ಎಸ್.ಡಬ್ಲೂ ಹಾಗೂ ವಿವಿಧ ಎಂ.ಎ(ಕನ್ನಡ, ಇಂಗ್ಲೀμï, ಹಿಂದಿ, ಸಂಸ್ಕøತ, ತೆಲುಗು, ಉರ್ದು, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಾರ್ವಜನಿಕ ಆಡಳಿತ, ಸಮಾಜಶಾಸ್ತ್ರ, ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ಹಾಗೂ ಶಿಕ್ಷಣಶಾಸ್ತ್ರ), ಎಂ.ಎ-ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಎಂ.ಕಾಂ, ವಿವಿಧ ಎಂ.ಎಸ್ಸಿ(ರಸಾಯನಶಾಸ್ತ್ರ, ಜೀವಶಾಸ್ತ್ರ, ಮಾನವಶಾಸ್ತ್ರ, ಸಸ್ಯಶಾಸ್ತ್ರ, ಜೈವಿಕ ತಂತ್ರಜ್ಞಾನ, ಪರಿಸರ ವಿಜ್ಞಾನ, ವೈದ್ಯಕೀಯ ಪೋಷಣೆ ಮತ್ತು ಆಹಾರ ಪದ್ಧತಿ, ಆಹಾರ ಮತ್ತು ಪೋಷಣೆ, ಜೀವರಸಾಯನ ಶಾಸ್ತ್ರ, ಭೂಗೋಳಶಾಸ್ತ್ರ, ಮಾಹಿತಿ ತಂತ್ರಜ್ಞಾನ, ಸೂಕ್ಷ್ಮ ಜೀವವಿಜ್ಞಾನ, ಗಣಿತಶಾಸ್ತ್ರ, ಭೌತಶಾಸ್ತ್ರ, ಪದವಿ ಶಿಕ್ಷಣ ಕ್ರಮಗಳಿಗೆ ವಿಶ್ವವಿದ್ಯಾನಿಲಯದ ನಿಯಮಗಳಿಗೆ ಅನುಗುಣವಾಗಿ ಸ್ಥಳದಲ್ಲಿಯೇ ದಾಖಲಾತಿಗಳನ್ನು ನೀಡಿ ಪ್ರವೇಶಾತಿ ಪಡೆದು ಶಿಕ್ಷಣವನ್ನು ಪಡೆಯಲು ಅವಕಾಶವಿರುತ್ತದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಅರ್ಜಿಯನ್ನು ಸಲ್ಲಿಸಿ ಕೊಪ್ಪಳ ಪ್ರಾದೇಶಿಕ ಕೇಂದ್ರ ಕಛೇರಿಗೆ ಭೇಟಿ ನೀಡಿ, ನಿಗದಿತ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ, ಅಗತ್ಯ ದಾಖಲಾತಿಗಳ ನಕಲು ಪ್ರತಿಗಳನ್ನು ಪ್ರಾದೇಶಿಕ ಕೇಂದ್ರ ಕಛೇರಿಯಲ್ಲಿ ಸಲ್ಲಿಸಿ ಪ್ರವೇಶಾತಿಯನ್ನು ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8904405994 ಅಥವಾ 8748845520, 8748845520, 7795066485, 8904405994, 9071179986, 7483607715 ಗೆ ಹಾಗೂ ವಿವಿಯ ಅಂತರ್ಜಾಲ ವಿಳಾಸ: www.ksoumysuru.ac.in ಕ್ಕೆ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಪ್ರಾದೇಶಿಕ ನಿರ್ದೇಶಕರಾದ ಸಂದೇಶ್ ಕೆ.ಎಸ್. ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್