ಹುಬ್ಬಳ್ಳಿ, 20 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಹುಬ್ಬಳ್ಳಿ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಆರ್.ಎಸ್.ಎಸ್. ಕ್ಷೇತ್ರಿಯ ಕಾರ್ಯವಾಹಕ ತಿಪ್ಪೇಸ್ವಾಮಿ, ಬಿಜೆಪಿ ಕಾರ್ಯಕರ್ತೆ ಶ್ರೀಮತಿ ಮಾಧವಿಲತಾ, ಎ.ಬಿ.ವಿ.ಪಿ. ರಾಜ್ಯ ಸಂಘಟನಾ ಕಾರ್ಯದರ್ಶಿ ವೆಂಕಟೇಶ ಡಾಂಗೆ ಸೇರಿದಂತೆ ಗಣ್ಯರು ಭೇಟಿ ನೀಡಿ ಉಭಯ ಶ್ರೀಗಳ ದರ್ಶನಾಶೀರ್ವಾದ ಪಡೆದರು.
ಮಠದ ವತಿಯಿಂದ ಅತಿಥಿಗಳಿಗೆ ಶಾಲು ಹೊದಿಸಿ, ಫಲಪುಷ್ಪ ನೀಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿ ಅಧ್ಯಕ್ಷ ಚನ್ನವೀರ ಮುಂಗರವಾಡಿ, ಕಮೀಟಿ ಸದಸ್ಯ ಡಾ.ವಿ.ಎಸ್.ವಿ.ಪ್ರಸಾದ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa