ವಿಜಯಪುರ, 20 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ರೈತ ಹಾಗೂ ಸಿಬ್ಬಂದಿ ತರಬೇತಿ ಕೇಂದ್ರದಲ್ಲಿ ಸೆಪ್ಟೆಂಬರ ೨೩ ರಂದು ಗೆದ್ದಲು ಹುಳುಗಳ ನಿರ್ವಹಣೆ ಕುರಿತು ತರಬೇತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ತರಬೇತಿಯಲ್ಲಿ ಭಾಗವಹಿಸಲು ಇಚ್ಚಿಸುವವರು ತಮ್ಮ ಹೆಸರನ್ನು ವಾಟ್ಸಪ್ ನಂ.೯೯೦೦೨೨೧೬೩೧ಗೆ ತಮ್ಮ ಹೆಸರು, ವಿಳಾಸ ಮೊನಂ ಸಹಿತ ಕಳುಹಿಸುವ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ತೋವಿವಿಯ ರೈತ ಹಾಗೂ ಸಿಬ್ಬಂದಿ ತರಬೇತಿ ಕೇಂದ್ರದ ಪ್ರಾದ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ.ವಸಂತ ಗಾಣಿಗೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande