ರಾಯಚೂರು, 21 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ರಾಯಚೂರು ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯ ಅಸ್ಕಿಹಾಳ ನಿವಾಸಿ ಆಂಜನೇಯ (62) ಅವರು ಸೆಪ್ಟೆಂಬರ್ 14ರ ಮಧ್ಯಾಹ್ನ 12.30ಕ್ಕೆ ಮನೆಯಲ್ಲಿ ಊಟ ಮಾಡಿ ಹೊರಗೆ ಹೋಗಿದ್ದು ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದು, ಈ ಕುರಿತು ಠಾಣಾ ಅಪರಾಧ ಸಂಖ್ಯೆ: 128/2025 ಕಲಂ ಮನುಷ್ಯ ಕಾಣೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ತಮ್ಮ ತಂದೆಯ ಮೊಬೈಲ್ ಸಂಖ್ಯೆ: 9008104144ಗೆ ಅಂದು ಸಂಜೆ ಕರೆ ಮಾಡಿ ವಿಚಾರಿಸಿದಾಗ ಅವರು ‘ಬರುತ್ತೇನೆ ಬಿಡು’ ಎಂದು ಸಿಟ್ಟು ಮಾಡಿದರು. ನಂತರ ಸಂಜೆ 4 ಗಂಟೆಗೆ ಕರೆ ಮಾಡಿದಾಗ ಅವರ ಮೊಬೈಲ್ ಸ್ವಿಚ್ಡ್ ಆಪ್ ಬಂದಿದೆ. ಕಾಣೆಯಾದ ತಮ್ಮ ತಂದೆಯ ಬಗ್ಗೆ ಸಂಬಂಧಿಕರ ಮನೆಯಲ್ಲಿ ಹುಡುಕಾಡಿದಾಗ ಪತ್ತೆಯಾಗಿರುವುದಿಲ್ಲ ಎಂದು ಕಾಣೆಯಾದ ಆಂಜನೇಯ ಅವರ ಪುತ್ರ, ನಾಗರಕಟ್ಟೆಯ ಕೃಷ್ಣಮೆಡೌಸ್ನಲ್ಲಿ ವಾಚಮನ್ ಆಗಿ ಕೆಲಸ ಮಾಡುವ ರಮೇಶ ಅವರು ದೂರು ದಾಖಲಿಸಿದ್ದಾರೆ.
ಕಾಣೆಯಾದ ವ್ಯಕ್ತಿಯ ಚಹರೆ: ಕಾಣೆಯಾದ ಆಂಜನೇಯ ಅವರು 5.6 ಎತ್ತರ, ತೆಳ್ಳನೆಯ ಮೈಕಟ್ಟು, ಗೋಧಿ ಮೈಬಣ್ಣ, ಉದ್ದನೆಯ ಮುಖ, ತಲೆಯಲ್ಲಿ ಕಪ್ಪು ಕೂದಲು ಹೊಂದಿದ್ದು, ಬಿಳಿ ಪಂಚೆ, ಬಿಳಿ ಜುಬ್ಬ ಹಾಗೂ ಹಸಿರು ಟಾವೆಲ್ ಬಟ್ಟೆಗಳನ್ನು ಧರಿಸಿರುತ್ತಾರೆ. ಕನ್ನಡ, ತೆಲುಗು, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ.
ಈ ವ್ಯಕ್ತಿಯ ಬಗ್ಗೆ ಸುಳಿವು ಕಂಡುಬಂದಲ್ಲಿ ಪಶ್ಚಿಮ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ: 08532-232570, ಪಿ.ಎಸ್.ಐ ಮೊಬೈಲ್ ಸಂಖ್ಯೆ: 9480803847, ಪಶ್ಚಿಮ ವೃತ್ತ ಸಿ.ಪಿ.ಐ ಮೊಬೈಲ್ ಸಂಖ್ಯೆ: 9480803831, ಜಿಲ್ಲಾ ನಿಸ್ತಂತು ಘಟಕ ರಾಯಚೂರು ದೂರವಾಣಿ ಸಂಖ್ಯೆ: 08532-235635, 9480803800ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಪಶ್ಚಿಮ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್