ಜಿಎಸ್‌ಟಿ ಕಡಿತದಿಂದ ಜನಸಾಮಾನ್ಯರಿಗೆ ಅನುಕೂಲ : ವಿಜಯೇಂದ್ರ
ಶಿವಮೊಗ್ಗ, 22 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಜಿಎಸ್​​ಟಿ ಕಡಿತದಿಂದ ಜನಸಾಮಾನ್ಯರಿಗೆ, ವ್ಯಾಪಾರಿಗಳಿಗೆ ತುಂಬಾ ಅನುಕೂಲವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಜಿಎಸ್​ಟಿಯ ಎರಡು ಹಂತದಲ್ಲಿನ ಕಡಿತದ ಹಿನ್ನಲೆಯಲ್ಲಿ ಜಿಲ್ಲಾ ಬಿಜೆಪಿ ಶಿವಮೊಗ್ಗದ ಶಿವಪ್ಪ ನಾಯಕ ವೃತ್ತದ
ಜಿಎಸ್‌ಟಿ ಕಡಿತದಿಂದ ಜನಸಾಮಾನ್ಯರಿಗೆ ಅನುಕೂಲ : ವಿಜಯೇಂದ್ರ


ಶಿವಮೊಗ್ಗ, 22 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಜಿಎಸ್​​ಟಿ ಕಡಿತದಿಂದ ಜನಸಾಮಾನ್ಯರಿಗೆ, ವ್ಯಾಪಾರಿಗಳಿಗೆ ತುಂಬಾ ಅನುಕೂಲವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಜಿಎಸ್​ಟಿಯ ಎರಡು ಹಂತದಲ್ಲಿನ ಕಡಿತದ ಹಿನ್ನಲೆಯಲ್ಲಿ ಜಿಲ್ಲಾ ಬಿಜೆಪಿ ಶಿವಮೊಗ್ಗದ ಶಿವಪ್ಪ ನಾಯಕ ವೃತ್ತದಲ್ಲಿ ಇಂದು ನಡೆದ ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ವ್ಯಾಪಾರಿಗಳಿಗೆ ಸಿಹಿ ಹಂಚಿದರು. ನಂತರ ಗಾಂಧಿ ಬಜಾರ್​​ನ ಅಂಗಡಿಗಳಿಗೆ ತೆರಳಿ, ಸಿಹಿ ಹಂಚುವ ಜೊತೆಗೆ ಜಿಎಸ್​​ಟಿ ಕಡಿತದ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಇಂದಿನಿಂದ ಜಿಎಸ್​​ಟಿ ಸುಧಾರಣೆಯ ಅನುಷ್ಟಾನ ಆಗುತ್ತಿದೆ. ಇಂದು ಐತಿಹಾಸಿಕ ದಿನ. ಇದನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ ಎಂದರು.

ಜಿಎಸ್​​ಟಿ ಸುಧಾರಣೆಯ ಬಗ್ಗೆ ಜನರಿಗೆ ಹಾಗೂ ವ್ಯಾಪಾರಿಗಳಿಗೆ ತಿಳಿಸಿದ್ದೇವೆ. 2047ನೇ ಇಸವಿಗೆ ವಿಕಸಿತ ಭಾರತ ಪರಿವರ್ತನೆ ಆಗಬೇಕೆಂಬ ಮೋದಿ ಅವರ ಕನಸಿಗೆ ಜಿಎಸ್​​ಟಿ ಸುಧಾರಣೆ ಸಾಕಷ್ಟು ಸಹಾಯ ಮಾಡಲಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande