ಗಾಂಧೀನಗರದಲ್ಲಿ ಸೆ.24ರಂದು ಕ್ರೀಡೆ, ಸಾಂಸ್ಕೃತಿಕ ದಸರಾ
ರಾಯಚೂರು, 22 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಸಿಂಧನೂರು ತಾಲೂಕು ಆಡಳಿತ, ತಾಲೂಕ ಪಂಚಾಯಿತಿ, ನಗರಸಭೆ, ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಸಿಂಧನೂರು ದಸರಾ ಉತ್ಸವ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಸಿಂಧನೂರ ತಾಲೂಕಿನ ಗಾಂಧಿನಗರ ಗ್ರಾಮದ ಶಿವಾಲಯದ ಹತ್ತಿರ ಸೆ.24ರ ಸಂಜೆ 4.30 ಗಂಟೆಗೆ ದಸರಾ ಕ್ರೀಡ
ಗಾಂಧೀನಗರದಲ್ಲಿ ಸೆ.24ರಂದು ಕ್ರೀಡೆ, ಸಾಂಸ್ಕೃತಿಕ ದಸರಾ


ರಾಯಚೂರು, 22 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಸಿಂಧನೂರು ತಾಲೂಕು ಆಡಳಿತ, ತಾಲೂಕ ಪಂಚಾಯಿತಿ, ನಗರಸಭೆ, ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಸಿಂಧನೂರು ದಸರಾ ಉತ್ಸವ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಸಿಂಧನೂರ ತಾಲೂಕಿನ ಗಾಂಧಿನಗರ ಗ್ರಾಮದ ಶಿವಾಲಯದ ಹತ್ತಿರ ಸೆ.24ರ ಸಂಜೆ 4.30 ಗಂಟೆಗೆ ದಸರಾ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ತೆಲುಗು ಖ್ಯಾತ ಚಿತ್ರ ನಟರಾದ ಮೇಕಾ ಶ್ರೀಕಾಂತ ಅವರು ಕಾರ್ಯಕ್ರಮ ಉದ್ಘಾಟಿಸುವರು.

ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು: ಸರಿಗಮಪ ಖ್ಯಾತಿಯ ವರ್ಣಾ ಬೆಂಗಳೂರು ಇವರಿಂದ ಸಂಗೀತ ಕಾರ್ಯಕ್ರಮ, ರಂಗಧಾರ ರೇಪರ್ಟರಿ (ರಿ) ಕೊಪ್ಪಳ ತಂಡದಿಂದ ಶಿಕ್ಷಣ, ಆರೋಗ್ಯ, ಕೃಷಿಗೆ ಸಂಬಂಧಿಸಿದಂತೆ ಜಾಗೃತಿ ರೂಪಕ ನಾಟಕಗಳು ಹಾಗೂ ಗ್ರಾಮೀಣ ಕಲಾ ತಂಡಗಳಿಂದ ಕಲೆ-ಸಂಸ್ಕೃತಿ-ಜನಪದ ಕಾರ್ಯಕ್ರಮ ಸೇರಿದಂತೆ ವಿವಿಧ ಕಾಲೇಜು ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಿಂಧನೂರು ದಸರಾ ಉತ್ಸವ ಸಮಿತಿಯ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande