ಗದಗ, 23 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗದವರು ಸ್ವಯಂ ಉದ್ಯೋಗ ಕೈಗೊಳ್ಳಲು ನೇರಸಾಲ ಹಾಗೂ ಸಹಾಯಧನ ಮಂಜೂರು ಮಾಡಲು ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಹಸು ಸಾಕಾಣಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ, ಇತ್ಯಾದಿ ವ್ಯಾಪಾರ-ವಹಿವಾಟುಗಳನ್ನು ಕೈಗೊಳ್ಳಲು ವಾರ್ಷಿಕ ಶೇ.4ರ ಬಡ್ಡಿ ದರದಲ್ಲಿ ಕನಿಷ್ಟ 1.00 ಲಕ್ಷ ಹಾಗೂ ಗರಿಷ್ಟ 2.00 ಲಕ್ಷ ರೂ.ಗಳ ವರೆಗೆ ಆರ್ಥಿಕ ನೆರವು ಒದಗಿಸಲಾಗುವುದು. ಅರ್ಜಿದಾರರು ಬ್ರಾಹ್ಮಣ ಸಮುದಾಯದ 18 ರಿಂದ 65 ವಯಸ್ಸಿನೊಳಗಿನ ಸಾಮಾನ್ಯ ವರ್ಗಕ್ಕೆ ಸೇರಿರಬೇಕು,
ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ಪ್ರಮಾಣ ಪತ್ರ ಹೊಂದಿರಬೇಕು, ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು, ಒಂದು ಕುಟುಂಬದಿಂದ ಒಬ್ಬರು ಮಾತ್ರ ಅರ್ಜಿ ಸಲ್ಲಿಸಬಹುದು.
ಮಹಿಳೆಯರಿಗೆ ಶೇ.33%, ವಿಶೇಷಚೇತನರಿಗೆ ಶೇ.5% ಮೀಸಲಾತಿ ಇದ್ದು, ಆಧಾರ್ಗೆ ಮೊಬೈಲ್ ಸಂಖ್ಯೆ ಲಿಂಗ್ ಆಗಿರಬೇಕು, ಬ್ಯಾಂಕ್ ಖಾತೆ ಸೀಡ್ ಆಗಿರಬೇಕು. ಆಸಕ್ತ ಅರ್ಜಿದಾರರು ವೆಬ್ಸೈಟ್ ಮೂಲಕ ಅಕ್ಟೋಬರ್ 31 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ : 8762249230 ಕ್ಕೆ ಸಂಪರ್ಕಿಸಲು ಗದಗ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿಗಳಾದ ಡಾ.ಮಲ್ಲೂರ ಬಸವರಾಜ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP