ಮೈಸೂರಿನಲ್ಲಿ ಭೈರಪ್ಪ ಸ್ಮಾರಕ ನಿರ್ಮಾಣ : ಸಿದ್ದರಾಮಯ್ಯ
ಬೆಂಗಳೂರು, 25 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಖ್ಯಾತ ಸಾಹಿತಿ ಎಸ್‌ಎಲ್ ಭೈರಪ್ಪ ಅವರು ನಿಧನರಾದ ಬಳಿಕ ಅವರ ಸ್ಮಾರಕವನ್ನು ನಿರ್ಮಿಸಲು ಕರ್ನಾಟಕ ಸರ್ಕಾರ ಹಸಿರು ನಿಶಾನೆ ತೋರಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಯಿತು. ಅಂತಿಮ ದರ್ಶ
Cm


ಬೆಂಗಳೂರು, 25 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಖ್ಯಾತ ಸಾಹಿತಿ ಎಸ್‌ಎಲ್ ಭೈರಪ್ಪ ಅವರು ನಿಧನರಾದ ಬಳಿಕ ಅವರ ಸ್ಮಾರಕವನ್ನು ನಿರ್ಮಿಸಲು ಕರ್ನಾಟಕ ಸರ್ಕಾರ ಹಸಿರು ನಿಶಾನೆ ತೋರಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಯಿತು. ಅಂತಿಮ ದರ್ಶನದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೈರಪ್ಪ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಮಾತನಾಡಿದ ಅವರು, ಭೈರಪ್ಪ ಅವರ ಕಾದಂಬರಿಗಳು ಜಗತ್ತಿಗೆ ಪ್ರಸಿದ್ಧವಾಗಿವೆ. ಅಪಾರ ಓದುಗರನ್ನು ಸಂಪಾದಿಸಿದವರು. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ,ಎಂದು ಹೇಳಿದರು.

ಹೆಚ್ಚಿನ ಸಮಯ ಮೈಸೂರಿನಲ್ಲಿ ವಾಸವಾಗಿದ್ದ ಭೈರಪ್ಪರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

ಭೈರಪ್ಪ ಅವರ ಕಾದಂಬರಿಗಳು ಅನೇಕ ಭಾಷೆಗಳಿಗೆ ಅನುವಾದಗೊಂಡಿದ್ದು, ಕನ್ನಡದ ಇತರ ಸಾಹಿತ್ಯಕಾರರ ಕೃತಿಗಳಿಗಿಂತ ಹೆಚ್ಚು ಪ್ರಸಿದ್ಧಿ ಪಡೆದಿವೆ. ಸರಸ್ವತಿ ಸಮ್ಮಾನ್ ಪುರಸ್ಕೃತರಾದ ಭೈರಪ್ಪ ಜ್ಞಾನಪೀಠ ಪ್ರಶಸ್ತಿಗೂ ಅರ್ಹರಾಗಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.

ಎಸ್‌ಎಲ್ ಭೈರಪ್ಪ ಬುಧವಾರ ಬೆಂಗಳೂರಿನ ರಾಜರಾಜೇಶ್ವರಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾದರು. ಮಧ್ಯಾಹ್ನದ ನಂತರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಮೈಸೂರಿಗೆ ಕೊಂಡೊಯ್ಯಲಾಗುವುದು. ಮೈಸೂರಿನ ಕಲಾಮಂದಿರದಲ್ಲಿ ಸಂಜೆ ಅಂತಿಮ ದರ್ಶನಕ್ಕೆ ಅವಕಾಶವಿದ್ದು, ಶುಕ್ರವಾರ ಮಧ್ಯಾಹ್ನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande