ವಿಜಯಪುರ, 25 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿ ಡೋಣಿ ನದಿ ಸೇತುವೆ ದಾಟಲು ಹೋದ ಸಂದರ್ಭದಲ್ಲಿ ಬೈಕ್ ಸವಾರರು ಕೊಚ್ಚಿ ಹೋದ ಸ್ಥಳಕ್ಕೆ ಮಾಜಿ ಶಾಸಕ ಎಸ್ ಪಾಟೀಲ್ ನಡಹಳ್ಳಿ ಭೇಟಿ ನೀಡಿದರು.
ಓರ್ವ ಯುವಕ ಕಾರ್ಯಚರಣೆಯಲ್ಲಿ ಪತ್ತೆಯಾಗಿ, ಇನ್ನೊಬ್ಬ ವ್ಯಕ್ತಿಯ ಹುಡುಕಾಟವನ್ನು ಅಗ್ನಿಶಾಮಕ ದಳದ ಸಂಬಂಧಿಗಳು ನಡೆಸುತ್ತಿರುವ ಹಿನ್ನಲೆ ಕಾರ್ಯಾಚರಣೆ ಸ್ಥಳಕ್ಕೆ ಭೇಟಿ ನೀಡಿದರು.
ಕೊಚ್ಚಿ ಹೋದ ಯುವಕನನ್ನು ಆದಷ್ಟು ಬೇಗ ಕಾರ್ಯಾಚರಣೆ ನಡೆಸಿ ಪತ್ತೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು, ತಹಸಿಲ್ದಾರ್ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande