ಬಳ್ಳಾರಿ, 25 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಸರ್ಕಾರದ ಬ್ಯಾಂಕಿಗ್ ಮತ್ತು ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನೀಡಲು ನಿರ್ಧರಿಸಲಾಗಿದ್ದು, ಅರ್ಹರು ನೋಂದಾಯಿಸಿಕೊಳ್ಳಬಹುದಾಗಿದೆ.
ಆಸಕ್ತರು ಸೆ.30 ರೊಳಗಾಗಿ ಬೆಳಿಗ್ಗೆ 10 ಗಂಟೆಯಿ0ದ ಸಂಜೆ 04 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ದೂ.0821-2515944/9964760090 ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಪ್ರೊ.ನವೀನ್ ಕುಮಾರ್ ಎಸ್.ಕೆ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್