ಮಹಾರಾಷ್ಟ್ರದಿಂದ ನೀರು ಬಿಡುಗಡೆ : ಕಲಬುರಗಿಯಲ್ಲಿ ಹೆಚ್ಚಿದ ಪ್ರವಾಹ
ಕಲಬುರಗಿ, 26 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಮಹಾರಾಷ್ಟ್ರದ ವೀರ್, ಉಜನಿ, ಸಿನಾ ಜಲಾಶಯ ಮತ್ತು ಬೋರಿ ನದಿಯಿಂದ ಅಪಾರ ಪ್ರಮಾಣದ ನೀರನ್ನು ಭೀಮಾ ನದಿಗೆ ಹರಿಬಿಟ್ಟ ಕಾರಣ ಕಲಬುರಗಿ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದೆ. ಮಹಾರಾಷ್ಟ್ರದಿಂದ ಈವರೆಗೂ ಸುಮಾರು 3.20 ಲಕ್ಷ ಕ್ಯೂಸೆಕ್ ನೀರನ್ನು ಭೀಮ ನದಿಗೆ ಹರಿ
Visit


ಕಲಬುರಗಿ, 26 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಮಹಾರಾಷ್ಟ್ರದ ವೀರ್, ಉಜನಿ, ಸಿನಾ ಜಲಾಶಯ ಮತ್ತು ಬೋರಿ ನದಿಯಿಂದ ಅಪಾರ ಪ್ರಮಾಣದ ನೀರನ್ನು ಭೀಮಾ ನದಿಗೆ ಹರಿಬಿಟ್ಟ ಕಾರಣ ಕಲಬುರಗಿ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದೆ. ಮಹಾರಾಷ್ಟ್ರದಿಂದ ಈವರೆಗೂ ಸುಮಾರು 3.20 ಲಕ್ಷ ಕ್ಯೂಸೆಕ್ ನೀರನ್ನು ಭೀಮ ನದಿಗೆ ಹರಿಬಿಡಲಾಗಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಜಿಲ್ಲೆಯ ಗಾಣಗಾಪುರ, ಸೊನ್ನ ಬ್ರಿಡ್ಜ್ ಕಂ ಬ್ಯಾರೇಜ್ ವೀಕ್ಷಣೆ ಮಾಡಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ. ಜನರ ಓಡಾಟಕ್ಕೆ ಅನುಕೂಲವಾಗುವಂತೆ ಸೂಕ್ತ ವ್ಯವಸ್ಥೆ ಮಾಡಲು ಸೂಚಿಸಿದರು.

ಭೀಮ ನದಿ ನೀರಿನ ಮಟ್ಟ ಏರಿಕೆಯಿಂದ ನೆರೆ ಸೃಷ್ಟಿಯಾಗಿದ್ದು, ನದಿ ತೀರದಲ್ಲಿರುವ ನಿವಾಸಿಗಳಿಗೆ ಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ. ಹಾಗೆಯೇ ಅಗತ್ಯ ಇರುವ ಕಡೆಗಳಲ್ಲಿ ಕಾಳಜಿ ಕೇಂದ್ರಗಳ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ ಸೆಪ್ಟೆಂಬರ್ 26ರ ವೇಳೆಗೆ ಸರಾಸರಿ 619 ಮಿಲಿ ಮೀಟರ್ ವಾಡಿಕೆ ಮಳೆ ಸುರಿದಿದ್ದು. ಆದರೆ ಈ ವರ್ಷ 915 ಮಿ.ಮೀಗಿಂತಲೂ ಅಧಿಕ ಮಳೆ ಸುರಿದಿರುವುದರಿಂದ ವ್ಯಾಪಕ ಅನಾಹುತವಾಗಿದೆ. ಪ್ರವಾಹ ಪರಿಸ್ಥಿತಿ ತಗ್ಗಿದ ನಂತರ ಮತ್ತೊಮ್ಮೆ ಭೇಟಿ ನೀಡಿ, ಸೂಕ್ತ ಪರಿಹಾರ ಒದಗಿಸಲು ಕ್ರಮವಹಿಸಲಾಗುವುದು ಸಚಿವ ಖರ್ಗೆ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande