ವಿಜಯಪುರ, 27 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಜಿಲಾಧಿಕಾರಿ ಸಂಗಪ್ಪ ಅವರು ಹುನಗುಂದ ಮತ್ತು ಇಲಕಲ್ಲ ತಾಲೂಕಿನ ವಿವಿದೆಡೆ ಭೇಟಿ ನೀಡಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ರವನ್ನು ಪರಿಶೀಲಿಸಿದರು.
ಹುನಗುಂದ ಪುರಸಭೆ ವ್ಯಾಪ್ತಿಯ ಆಜಾದ ನಗರಕ್ಕೆ ಭೇಟಿ ನೀಡುದ ಜಿಲ್ಲಾಧಿಕಾರಿಗಳು ಸಮೀಕ್ಷೆ ನಡೆಸುತ್ತಿರುವ ಗಣತಿ ಕಾರ್ಯವನ್ನು ಪರಿಶೀಲಿಸಿದರು. ಕಮತಗಿ ಪಟ್ಟಣದಲ್ಲೂ ಸಮೀಕ್ಷೆ ಕಾರ್ಯ ಪರಿಶೀಲಿಸಿದರಯ.ನಂತರ ಇಲಕಲ್ಲ ನಗರ ಮತ್ತು ಹನಮನಾಳ ಗ್ರಾಮದಲ್ಲಿ ಮನೆ ಮನೆ ಸಮೀಕ್ಷೆ ಪರಿಶೀಲಿಸಿದರು. ಅಲ್ಲದೇ ಸಮೀಕ್ಷೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದುಕೊಂಡರು.
ಇಲಕಲ್ಲದಲ್ಲಿರು ಮೆಟ್ರಿಕ್ನಂತರದ ವೃತ್ತಿಪರ ಬಾಲಕಿಯರ ವಿದ್ಯಾರ್ಥಿ ನಿಲಯ ಭೇಟಿ ನೀಡಿ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳೊಂದಿಗೆ ಮಾತನಾಡಿದರು. ಸರಕಾರ ಎಲ್ಲ ರೀತಿಯ ಸೌಲಭ್ಯ ನೀಡುತ್ತಿದ್ದು ಅದರ ಸದುಯೋಗ ಪಡಿಸಿಕೊಳ್ಳಬೇಕು. ಜೀವನದಲ್ಲಿ ನಿರ್ಧಿಷ್ಠ ಗುರಿ ಇಟ್ಟುಕೊಂಡು ಆ ಗುರಿ ತಲುಪುವ ನಿಟ್ಟಿನಲ್ಲಿ ಪ್ರಯತ್ನ ಪಡಬೇಕು ಎಂದರು.ನಂತರ ವಿದ್ಯಾಥಿಗಳೊಂದಿಗೆ ಊಟ ಸವಿದರು.
ಭೇಟಿ ಸಮಯದಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಇಲಕಲ್ಲ ತಹಶೀಲ್ದಾರ ಅಮರೇಶ ಪಮ್ಮಾರ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande