ಗದಗನಲ್ಲಿ ಸರ್ಕಾರದ ಯೋಜನೆ ಅರ್ಹತೆ ಇಲ್ಲದವರ ಪಾಲು, ಉಪ ತಹಶಿಲ್ದಾರ ಅಮಾನತು
ಗದಗ, 29 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಗದಗ ತಹಶೀಲ್ದಾರರ ಕಚೇರಿಯಲ್ಲಿ ಸಂಧ್ಯಾ ಸುರಕ್ಷಾ, ವಿಧವಾ ವೇತನ, ವೃದ್ಧಾಪ್ಯ ವೇತನ ಕುರಿತಂತೆ ಸಾಮಾಜಿಕ ಭದ್ರತಾ ಯೋಜನೆಗಳಡಿ ಅನರ್ಹರಿಗೆ ಮಂಜೂರಾತಿ ಆರೋಪದಡಿ ಉಪ ತಹಶೀಲ್ದಾರ ಡಿ.ಟಿ.ವಾಲ್ಮೀಕಿ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದ
ಪೋಟೋ


ಗದಗ, 29 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಗದಗ ತಹಶೀಲ್ದಾರರ ಕಚೇರಿಯಲ್ಲಿ ಸಂಧ್ಯಾ ಸುರಕ್ಷಾ, ವಿಧವಾ ವೇತನ, ವೃದ್ಧಾಪ್ಯ ವೇತನ ಕುರಿತಂತೆ ಸಾಮಾಜಿಕ ಭದ್ರತಾ ಯೋಜನೆಗಳಡಿ ಅನರ್ಹರಿಗೆ ಮಂಜೂರಾತಿ ಆರೋಪದಡಿ ಉಪ ತಹಶೀಲ್ದಾರ ಡಿ.ಟಿ.ವಾಲ್ಮೀಕಿ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಇಂದು ನಾನೇ ಖುದ್ದಾಗಿ ಕಚೇರಿಗೆ ಹೋಗಿ ಪರಿಶೀಲನೆ ನಡೆಸಲಾಗಿ ಅನರ್ಹರಿಗೆ ಪಿಂಚಣಿ ಮಂಜೂರು ಮಾಡಿರುವ ಕುರಿತು ಕಂಡು ಬಂದ ಹಿನ್ನೆಲೆಯಲ್ಲಿ ಅಮಾನತ್ತು ಕ್ರಮ ವಹಿಸಲಾಗಿದೆ.

ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ್ ಸುದ್ದಿಗೋಷ್ಠಿ ನಡೆಸಿ ಉಪ ತಹಶಿಲ್ದಾರ ಅವರನ್ನು ಅಮಾನತು ಮಾಡಲಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ 17,997 ಅನರ್ಹರಿಗೆ ಪಿಂಚಣಿ ಮಂಜೂರಾತಿ ಆಗಿರುವುದು ತಿಳಿದು ಬಂದಿದ್ದು ಇದರ ಸತ್ಯಾಸತ್ಯತೆಗಾಗಿ ಸಂಪೂರ್ಣ ತನಿಖೆಗೆ ಸೂಚಿಸಲಾಗಿದೆ. ಅನರ್ಹರಿಗೆ ವಿತರಣೆಯಾಗುತ್ತಿರುವ ಪಿಂಚಣಿ ಹಣ ತಕ್ಷಣ ನಿಲ್ಲಿಸಬೇಕೆಂದು ಈಗಾಗಲೇ ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿಗಳು ಈ ಕುರಿತು ಸಾಕಷ್ಟು ವಿಚಾರಣೆ ನಡೆಸಿ ಅನರ್ಹರಿಗೆ ಕೊಡುವಂತಹ ಸೌಲಭ್ಯ ನಿಲ್ಲಿಸುವ ಕುರಿತು ಇಲಾಖೆಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾದಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಇದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande