ಹೊಸಪೇಟೆ, 29 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಅಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯಿಂದ ನಾಳೆ ಬೆ.11 ಗಂಟೆಯಿಂದ 01 ಗಂಟೆಯವರೆಗೆ ಜಿಲ್ಲಾ ಒಳಕ್ರೀಡಾಂಗಣದಲ್ಲಿ ವಿಶ್ವ ಔಷಧ ತಜ್ಞರ ದಿನಾಚರಣೆ ಮತ್ತು ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಹಾಯಕ ಔಷಧ ನಿಯಂತ್ರಕರು ಜಿ.ವಿ.ನಾರಾಯಣರೆಡ್ಡಿ ಅವರು ತಿಳಿಸಿದ್ದಾರೆ.
ವಿಶ್ವ ಔಷಧ ತಜ್ಞರ ದಿನಾಚರಣೆಗೂ ಮುನ್ನ ಜಾಗೃತಿ ಜಾಥಾವನ್ನು ನಾಳೆ ಬೆ.10 ಗಂಟೆಯಿಂದ 11 ಗಂಟೆಯವರೆಗೆ ಹೊಸಪೇಟೆ ನಗರದ ವಡಕರಾಯ ದೇವಸ್ಥಾನದಿಂದ ಆರಂಭಗೊಂಡು ಗಾಂಧಿ ಚೌಕ್ ಮಾರ್ಗವಾಗಿ ಪುನೀತ್ ರಾಜಕುಮಾರ ಕ್ರೀಡಾಂಗಣದವರೆಗೆ ಮುಕ್ತಾಯಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್