ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ಹೊಸಪೇಟೆ, 30 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : 2025-26ನೇ ಸಾಲಿನಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಧೈರ್ಯ, ಸಾಹಸ ಪ್ರದರ್ಶಿಸಿದ ಮಕ್ಕಳಿಗೆ ನೀಡುವ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ
ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ


ಹೊಸಪೇಟೆ, 30 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : 2025-26ನೇ ಸಾಲಿನಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಧೈರ್ಯ, ಸಾಹಸ ಪ್ರದರ್ಶಿಸಿದ ಮಕ್ಕಳಿಗೆ ನೀಡುವ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ವೇತಾ ತಿಳಿಸಿದ್ದಾರೆ.

6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಮತ್ತು ಸಾಹಸ ಪ್ರದರ್ಶಿಸಿದ ಬಾಲಕರಿಗೆ ‘ಹೊಯ್ಸಳ’ ಪ್ರಶಸ್ತಿ ಮತ್ತು ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ’ ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಗುತ್ತದೆ.

ಪ್ರಶಸ್ತಿಗೆ ಸಲ್ಲಿಸುವ ಪ್ರಕರಣವು 01ನೇ ಆಗಸ್ಟ್-2024 ರಿಂದ 31ನೇ ಜುಲೈ 2025 ರೊಳಗೆ ನಡೆದಿರಬೇಕು. ಪ್ರಶಸ್ತಿಗೆ ಆಯ್ಕೆಯಾದವರಿಗೆ ತಲಾ ರೂ.10 ಸಾವಿರ ರೂಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. ಮಕ್ಕಳ ದಿನಾಚರಣೆ 2025 ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಜಿಲ್ಲಾ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯವರಿಂದ ಪಡೆದು ಕನ್ನಡ ಭಾμÉಯಲ್ಲಿ ದ್ವಿಪ್ರತಿಯಲ್ಲಿ ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ, ಭರ್ತಿ ಮಾಡಿದ ಅರ್ಜಿಗಳನ್ನು ಅಕ್ಟೋಬರ್.08 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 16ನೇ ವಾರ್ಡ, ಬಸವೇಶ್ವರ ಬಡಾವಣೆ, ಮಾತಾ ಆಸ್ಪತ್ರೆ ಹತ್ತಿರ, ವಿಜಯನಗರ. ದೂ.08394-223583 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande