ಬೆಂಗಳೂರು, 30 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಕಾಂಗ್ರೆಸ್ನಲ್ಲಿ ಅಕ್ಟೋಬರ್ ಕ್ರಾಂತಿಯಾಗುವ ಲಕ್ಷಣಗಳು ಕಂಡು ಬಂದಿವೆ. ಕ್ರಾಂತಿಯ ನಂತರ ಮುಖ್ಯಮಂತ್ರಿ ಬದಲಾವಣೆಯಾಗುವ ಲಕ್ಷಣವಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಅಸ್ಥಿರಗೊಂಡು ಬಿದ್ದುಹೋದರೆ ಚುನಾವಣೆ ಮಾಡುವುದು ಸೂಕ್ತ. ನಾವು ಕಾಂಗ್ರೆಸ್ನಂತೆ ಸರ್ಕಾರ ಬೀಳಿಸಲು ಹೋಗುವುದಿಲ್ಲ. ಎರಡೂವರೆ ವರ್ಷಗಳಲ್ಲಿ ಸರ್ಕಾರ ಟೇಕಾಫ್ ಆಗಿಲ್ಲ. ಕಾಂಗ್ರೆಸ್ ಶಾಸಕರು ಹಾಗೂ ಸಚಿವರು ಅಭಿವೃದ್ಧಿ ಆಗಿಲ್ಲ ಎನ್ನುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಚುನಾವಣೆ ನಡೆಯುವುದು ಸೂಕ್ತ ಎಂದರು
ಹಿಂದೂಸ್ತಾನ್ ಸಮಾಚಾರ್ / Rakesh Mahadevappa