ವಿಜಯಪುರ, 04 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ಜಿಲ್ಲಾ ತೋಟಗಾರಿಕೆ ಬೆಳೆಗಾರರ ಸಹಕಾರಿ ಮಾರುಕಟ್ಟೆ ಹಾಗೂ ಸಂಸ್ಕರಣಾ ಸಂಘದ ೨೦೨೪-೨೫ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಸೆ.೦೮ರಂದು ಬೆಳಿಗ್ಗೆ ೧೧ ಗಂಟೆಗೆ ನವನಗರ ತೋಟಗಾರಿಕೆ ಕ್ಷೇತ್ರ ಕಚೇರಿಯಲ್ಲಿ ನಡೆಯಲಿದೆ.
ಸಭೆಗೆ ಸಂಘದ ಅಧ್ಯಕ್ಷ ಈರಪ್ಪ ತಿಪ್ಪಣ್ಣ ಅರಕೇರಿ ಅಧ್ಯಕ್ಷತೆ ವಹಿಸಲಿದ್ದು, ಎಲ್ಲಾ ಸದಸ್ಯರಿಗೆ ಆಹ್ವಾನ ಪತ್ರಿಕೆ ಕಳುಹಿಸಲಾಗಿದ್ದು, ಪತ್ರಿಕೆ ತಲುಪದಿದ್ದರೂ ಇದನ್ನೇ ಅಧಿಕೃತ ಆಹ್ವಾನವಾಗಿ ಪರಿಗಣಿಸಿ, ಸಮಯಕ್ಕೆ ಸಭೆಯಲ್ಲಿ ಪಾಲ್ಗೊಳ್ಳುವಂತೆ ಸಹಾಯಕ ಹಾಗೂ ವ್ಯವಸ್ಥಾಪಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande