ಬಳ್ಳಾರಿ, 04 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಪ್ರಸ್ತಕ ಸಾಲಿನ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಉಮಾದೇವಿ ಅವರು ತಿಳಿಸಿದ್ದಾರೆ.
ಶಿಕ್ಷಕರ ಪಟ್ಟಿ :
ಕಿರಿಯ ಪ್ರಾಥಮಿಕ ಶಾಲೆ ವಿಭಾಗ :
ಬಳ್ಳಾರಿ ಪೂರ್ವ ವಲಯ ಹನುಮಾನ್ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಹಾಂತೇಶ, ಸಂಡೂರು ತಾಲ್ಲೂಕಿನ 6ನೇ ವಾರ್ಡ್ನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಜಿ.ಆರ್.ರೇಣುಕಮ್ಮ, ಸಿರುಗುಪ್ಪ ತಾಲ್ಲೂಕಿನ ಬಿ.ಬಿ.ಕ್ಯಾಂಪ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಹೇಶ್ ವೈ.
ಹಿರಿಯ ಪ್ರಾಥಮಿಕ ಶಾಲೆ ವಿಭಾಗ :
ಬಳ್ಳಾರಿ ಪೂರ್ವ ವಲಯ ಟಿ.ಜೆ ಆಯಿಲ್ ಮಿಲ್ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ನಸೀಮ ಆರ್.ಕೆ., ಹವಂಭಾವಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿಜಯಲಕ್ಷಿö್ಮÃ ಗಂಗಣ್ಣನವರು, ಕುರುಗೋಡು ತಾಲ್ಲೂಕಿನ ಯರಂಗಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಛಾಯದೇವಿ ಬಿ.ಎಂ., ಸಂಡೂರು ತಾಲ್ಲೂಕಿನ ಆಶ್ರಯ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ರಾಜಣ್ಣ, ಸಿರುಗುಪ್ಪ ತಾಲ್ಲೂಕಿನ ತೆಕ್ಕಲಕೋಟೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಾಂತಮ್ಮ ಎಸ್., ಕಂಪ್ಲಿ ತಾಲ್ಲೂಕಿನ ಕೋಟೆ ಪ್ರದೇಶದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೊಸಗೆರೆಪ್ಪ, ಶಿವಪುರ ಮೆಟ್ರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗಾದಿಲಿಂಗಪ್ಪ.
ಪ್ರೌಢ ಶಾಲೆ ವಿಭಾಗ :
ಬಳ್ಳಾರಿ ಪೂರ್ವ ವಲಯದ ಬಳ್ಳಾರಿ ಬಾಲಕೀಯರ ಸರ್ಕಾರಿ ಪ್ರೌಢ ಶಾಲೆಯ ಶಿವಕುಮಾರ ಎ., ಮೋಕದ ಸರ್ಕಾರಿ ಪ್ರೌಢ ಶಾಲೆಯ ವಿಶೇಷ ವೃತ್ತಿ ಶಿಕ್ಷಕ, ಕುರುಗೋಡು ತಾಲ್ಲೂಕಿನ ಯರಂಗಳಿಯ ಸರ್ಕಾರಿ ಪ್ರೌಢ ಶಾಲೆಯ ಹುಲೆಪ್ಪ ಹೆಚ್., ಸಂಡೂರು ತಾಲ್ಲೂಕಿನ ಸಂಡೂರು ಛತ್ರಪತಿ ಶಿವಾಜಿ ವಿದ್ಯಾಮಂದಿರ ಸರ್ಕಾರಿ ಪ್ರೌಢ ಶಾಲೆಯ ಮಹಮ್ಮದ್ ಜಾವೀದ್, ಯು.ರಾಜಾಪುರದ ಸರ್ಕಾರಿ ಪ್ರೌಢ ಶಾಲೆಯ ಹಯಾದ್ ಭಾಷ ಕೆ., ಸಿರುಗುಪ್ಪ ತಾಲ್ಲೂಕಿನ ಸಿರುಗುಪ್ಪ ಸರ್ಕಾರಿ ಪ್ರೌಢ ಶಾಲೆಯ ಜೀವೇಶ್ ಕುಲಕರ್ಣಿ, ಕಂಪ್ಲಿ ತಾಲ್ಲೂಕಿನ ಚಿಕ್ಕಜಾಯಿಗನೂರಿನ ಸರ್ಕಾರಿ ಪ್ರೌಢ ಶಾಲೆಯ ಮುದುಕಪ್ಪ ಆಯ್ಕೆಯಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಉಮಾದೇವಿ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್