ಸೆ.8 ರಿಂದ ಆದಿ ಕರ್ಮಯೋಗಿ ಅಭಿಯಾನ ತರಬೇತಿ ಕಾರ್ಯಾಗಾರ
ಕೊಪ್ಪಳ, 06 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರ ನಿರ್ದೇಶನದನ್ವಯ ರಾಜ್ಯದಲ್ಲಿ ಆದಿ ಕರ್ಮಯೋಗಿ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಗಾರವನ್ನು ಮೂರು ದಿನಗಳ ಕಾಲ ವಸತಿ ಸಹ
ಸೆ.8 ರಿಂದ ಆದಿ ಕರ್ಮಯೋಗಿ ಅಭಿಯಾನ ತರಬೇತಿ ಕಾರ್ಯಾಗಾರ


ಕೊಪ್ಪಳ, 06 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರ ನಿರ್ದೇಶನದನ್ವಯ ರಾಜ್ಯದಲ್ಲಿ ಆದಿ ಕರ್ಮಯೋಗಿ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಗಾರವನ್ನು ಮೂರು ದಿನಗಳ ಕಾಲ ವಸತಿ ಸಹಿತವಾಗಿ ಆಯೋಜಿಸಲಾಗಿದೆ.

ಈ ಕಾರ್ಯಕ್ರಮವು ಸೆಪ್ಟೆಂಬರ್ 8 ರಿಂದ 10 ರವರೆಗೆ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತಿಯ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ನಡೆಯಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ.ಇಟ್ನಾಳ ಅವರು ವಹಿಸಿಕೊಳ್ಳುವರು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಅಜ್ಜಪ್ಪ ಸೊಗಲದ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande