ಗದಗ ಜಿಲ್ಲಾಡಳಿತ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ
ಗದಗ, 07 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಸಮಾಜನದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವೆಂಬ, ಒಬ್ಬ ಮಹಾನ್ ಸಮಾಜಕ ಸುಧಾರಕ ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆಮಾಡಲು ತಮ್ಮ ಇಡೀಜೀವನವನ್ನು ಮುಡಿಪಾಗಿಟ್ಟು ಹೋರಾಡಿದವರು ಎಂದು ಅಪರ ಜಿಲ್ಲಾಧಿಕಾರಿ ಡಾ. ದುರಗ
ಪೋಟೋ


ಗದಗ, 07 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಸಮಾಜನದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವೆಂಬ, ಒಬ್ಬ ಮಹಾನ್ ಸಮಾಜಕ ಸುಧಾರಕ ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆಮಾಡಲು ತಮ್ಮ ಇಡೀಜೀವನವನ್ನು ಮುಡಿಪಾಗಿಟ್ಟು ಹೋರಾಡಿದವರು ಎಂದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ ಆರ್ ಅವರು ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿಂದು ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಸಮಾರಂಭದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಾರಾಯಣ ಗುರುಗಳು ಪ್ರತಿಪಾದಿಸಿದ ತತ್ವವೇ ಇಂದು ಜಗತ್ತಿನಲ್ಲಿರುವುದು ಎಂದ ಅವರು, ಒಂದೇ ಜಾತಿ, ಒಂದೇ ಮತ, ಹಾಗೂ ಒಂದೇ ದೇವರು ಎಂಬ ಸತ್ಯವಾಕ್ಯವನ್ನು ಸಮಾಜಕ್ಕೆ ಸಾರಿದವರಲ್ಲಿ ಪ್ರಮುಖರು ಎಂದು ತಿಳಿಸಿದರು.

ಸಂಸ್ಕೃತ ಭಾಷೆಭಾಷೆಯಲ್ಲಿ ಅದ್ವಿತೀಯ ಪಂಡಿತರಾಗಿದ್ದ ನಾರಾಯಣ ಗುರುಗಳು, ಕೇರಳ ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿಗೆ ತಮ್ಮದೇ ಆದ ನಿಲುವಿನಲ್ಲಿ, ಸಮಾಧಾನಕರವಾದ ಉಪಾಯಗಳನ್ನು ಕಂಡುಕೊಂಡರು. ಅವರು ಬೋಧಿಸಿದ್ದು, ದೇಶ ಸೇವೆಯೇ ಈಶ ಸೇವೆಯೆಂದು. ನಾರಾಯಣ ಗುರುಗಳು ಕೇರಳದ ಶಿವಗಿರಿಯಿಂದ 45 ಕಿಲೋಮೀಟರ್ ಉತ್ತರಕ್ಕೆ

ತಿರುವನಂತಪುರದಿಂದ 12 ಕಿಲೋಮೀಟರ್ ದೂರದ ಉತ್ತರಪೂರ್ವ ಸೀಮೆಯಲ್ಲಿರುವ ಚೆಂಬಳಾಂತಿ ಗ್ರಾಮದ ತೀಯಾ ಸಮಾಜದವರಾದ ಮದನ್ ಆಸನ್ ಹಾಗೂ ಕುಟ್ಟಿ ಅಮ್ಮಾಳ್ ಎಂಬ ದಂಪತಿಗಳಿಗೆ ದಿನಾಂಕ 18-8-1854 ರಂದು ಜನಿಸಿದರು ಎಂದು ಅವರ ಬಾಲ್ಯ ಕುರಿತು ಡಾ. ದುರಗೇಶ್ ಕೆ ಆರ್ ಅವರು ವಿವರಿಸಿದರು.

ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಜಿ ಅವರು ಜಯಂತಿಗೆ ಚಾಲನೆ ನೀಡಿ ಮಾತನಾಡಿ, ಆರ್ಯ ಈಡಿಗ ಸಮುದಾಯದವರು ಮೊದಲು ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಮುಂದಾಗಬೇಕು. ಆ ಮೂಲಕ ಸಮುದಾಯ ಸಮಾಜಿಕವಾಗಿ ಆರ್ಥಿಕ ವಾಗಿ ಮುಂದೆ ಬರಬೇಕು ಎಂದರು.

ಗದುಗಿನ ಪರಶುರಾಮ ಈಳಗೇರ ಉಪನ್ಯಾಸ ನೀಡುತ್ತಾ, ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಜಕ್ಕೆ ನೀಡಿದ ಕೊಡುಗೆ ನಾವೆಲ್ಲ ಮರೆಯಬಾರದು. ಅವರ ಮಾರ್ಗದರ್ಶನ ನಮಗೆಲ್ಲ ಸ್ಪೂರ್ತಿಯಾಗಿಟ್ಟುಕೊಂಡು ಜೀವನದಲ್ಲಿ ಮುಂದೆ ಸಾಗೋಣ ಎಂದರು.

ಕೇರಳದಲ್ಲಿ ಅನೇಕ ಜಾತಿಪಂಥಗಳಿದ್ದವು. ಮೇಲ್ದಾತಿ, ಕೆಳಜಾತಿ, ಅಸ್ಪೃಷ್ಯತೆ ಮುಂತಾದ ಸಾಮಾಜಿಕ ಸಮಸ್ಯೆಗಳು ಎಲ್ಲೆಡೆ ಜನರ ಮನಸ್ಸನ್ನು ಹರಿದು ತಿನ್ನುತ್ತಿದ್ದವು. ಆಗ ಪಣತೊಟ್ಟು ಜಾತಿಯತೆ ತೊಲಗಿಸುವುದು ತಮ್ಮ ಜೀವನದ ಧೈಯವೆಂದು ಶಪಥಮಾಡಿದವರು ನಾರಾಯಣ ಗುರುಗಳು ಎಂದರು.

ಸಮಾಜದ ವಿರೋಧಿ ಕಾರ್ಯಗಳಿಗೆ ಮುಟ್ಟುಗೋಲು ಹಾಕಲು ಅವರು ತೆಗೆದುಕೊಂಡ ಕ್ರಮಗಳು, ಆಂದೋಲನಗಳು ಅನನ್ಯ. ಕೆಳವರ್ಗದಲ್ಲಿ ಜನಿಸಿದ ಜನರಿಗೆ ದೇವಸ್ಥಾನಗಳಲ್ಲಿ ಅನುಮತಿಕೊಡಲು ಅವರು ಬೇಡಲಿಲ್ಲ. ಅಥವಾ ಹಿಂಸಾಚಾರದ ಚಳುವಳಿಗಳನ್ನೂ ನಡೆಸದೆ, ತಾವೇ ದೇವಾಲಯಗಳನ್ನು ಸ್ಥಾಪಿಸುವುದರ ಮೂಲಕ ಒಂದು ಹೊಸ-ಅನನ್ಯ-ಆಲೋಚನಾ ಕ್ರಮವನ್ನು ಹುಟ್ಟುಹಾಕಿದರು. ಕೇರಳದಾದ್ಯಂತವೂ ಸುಮಾರು 60 ಕ್ಕೂ ಹೆಚ್ಚು ದೇವಾಲಯಗಳನ್ನು ಸ್ಥಾಪಿಸಿದರು ಎಂದು ಹೇಳಿದರು.

ನಾರಾಯಣ ಗುರುಗಳ ಬದುಕೇ ಸನಾತನ ಧರ್ಮದಂತಿದ್ದು, ಅವರ ಸೇವಾ ವ್ಯಾಪ್ತಿ ವಿಶಾಲವಾಗಿತ್ತು. ಚಿಂತನೆಗಳು ಅಮೂಲ್ಯವಾಗಿದ್ದವು. ಯಾವುದೇ ಲೋಪ ದೋಷಗಳಿರದ ಜನಪರ ಕಾಳಜಿ ಅವರಿಗೆ ಇತ್ತು. ಅಹಿಂಸೆಯಲ್ಲಿ ಬುದ್ಧ, ಯೋಗದಲ್ಲಿ ಅವರು ಪತಂಜಲಿ, ಜ್ಞಾನದಲ್ಲಿ ಶಂಕರ, ಅಹಿಂಸೆಯಲ್ಲಿ

ಮಾನವೀಯತೆಯಲ್ಲಿ ಏಸು ಗಳೆಲ್ಲರಂತೆ ಇದ್ದರು ಎಂದು‌ ವಿವರವಾಗಿ ಪರಶುರಾಮ ಈಳಗೇರ ಉಪನ್ಯಾಸ ನೀಡಿದರು.

ಸಾಧನೆ ಸನ್ಮಾನ, ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಅನಿತಾ ಶಿವಮೂರ್ತಪ್ಪ ಕುರ್ತಕೋಟಿ, ಮಂಜುನಾಥ ರಮೇಶ ಹುಲಕೋಟಿ, ಬಸವರಾಜ ಹನುಮಂತಪ್ಪ ಈಳಗೇರ ಅವರನ್ನು ಇದೇ ಸಂಧರ್ಭದಲ್ಲಿ ಸನ್ಮಾನಿಸಲಾಯಿತು. ಅದರಂತೆ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಗೈದ ಪ್ರಭು ಈಳಗೇರ, ಸಿಂಧು ಈಳಗೇರ, ಅರುಣ ಈಳಗೇರ, ಆನಂದ ಈಳಗೇರ, ಅಭಿಷೇಕ ಈಳಗೇರ, ಶೈಲಾ ಈಳಗೇರ, ಪೃಥ್ವಿ ಈಳಗೇರ, ಭೂಮಿಕಾ ಈಳಗೇರ, ಸಂಜನಾ ಈಳಗೇರ, ಬಸವರಾಜ ಈಳಗೇರ, ಸುಪ್ರೀಯಾ ಹೊಸಪೇಟೆ, ಸಮೃದ್ದಿ ಹಾನಗಲ್, ಆಶಾ ಕುರ್ತಕೋಟಿ, ಅನನ್ಯ ಕುರ್ತಕೋಟಿ ಅವರುಗಳನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಸಮಾಜದ ಜಿಲ್ಲಾಧ್ಯಕ್ಷ ಪ್ರಕಾಶ್ ಬೊಮ್ಮನಹಳ್ಳಿ ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಜಿಲ್ಲಾ ವಾರ್ತಾಧಿಕಾರಿ ವಸಂತ ಬಿ ಮಡ್ಲೂರ ಸೇರಿದಂತೆ ಸಮಾಜದ ಗಣ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಗದಗ ಜಿಲ್ಲಾಧ್ಯಕ್ಷರು ಆಗಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ ಅವರು ಅತಿಥಿಗಳನ್ನು ಸ್ವಾಗತಿಸಿ, ಪ್ರಸ್ತಾವಿಕ ಮಾತನಾಡಿದರು. ಪ್ರೊ. ಬಾಹುಬಲಿ ಜೈನರ್ ಕಾರ್ಯಕ್ರಮ ನಿರ್ವಹಿಸಿದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande