ಸಮಾಜ ಸುಧಾರಣೆಗಾಗಿ ಶ್ರಮಿಸಿದವರು ನಾರಾಯಣ ಗುರುಗಳು : ಸೋಮಲಿಂಗ ಗೆಣ್ಣೂರ
ವಿಜಯಪುರ, 07 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಅಂದಿನ ಸಮಾಜದಲ್ಲಿನ ಮೂಢನಂಬಿಕೆ ಹಾಗೂ ಮೌಢ್ಯತೆ, ಅಸಮಾನತೆ ನಿವಾರಿಸಲು ಸಮಾಜಕ್ಕೆ ಸಂದೇಶ ನೀಡಿ, ಸಮಾಜ ಸುಧಾರಣೆಗಾಗಿ ಶ್ರಮಿಸಿದವರು ಬ್ರಹ್ಮಶ್ರೀ ನಾರಾಯಣಗುರು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾಪಂಚ
ಜಿಲ್ಲಾಡಳಿತ


ವಿಜಯಪುರ, 07 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಅಂದಿನ ಸಮಾಜದಲ್ಲಿನ ಮೂಢನಂಬಿಕೆ ಹಾಗೂ ಮೌಢ್ಯತೆ, ಅಸಮಾನತೆ ನಿವಾರಿಸಲು ಸಮಾಜಕ್ಕೆ ಸಂದೇಶ ನೀಡಿ, ಸಮಾಜ ಸುಧಾರಣೆಗಾಗಿ ಶ್ರಮಿಸಿದವರು ಬ್ರಹ್ಮಶ್ರೀ ನಾರಾಯಣಗುರು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಇವರ ಸಹಯೋಗದಲ್ಲಿ ಭಾನುವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮ0ದಿರದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮೌಢ್ಯತೆ, ಶೋಷಣೆಗಳಿಂದ ತುಂಬಿದ ಸಮಾಜದಲ್ಲಿನ ಅಂಕುಡೊ0ಕುಗಳನ್ನು ತಿದ್ದಲು ಶ್ರಮಿಸಿದ ಬ್ರಹ್ಮಶ್ರೀ ಅವರ ಆದರ್ಶ-ವಿಚಾರಗಳ ಬಗ್ಗೆ ಅರಿವು ಹೊಂದಬೇಕು. ಅವರು ಹಾಕಿಕೊಟ್ಟ ಮಾರ್ಗದದಲ್ಲ್ಲಿ ನಡೆಯಬೇಕು ಸರ್ವರ ಒಳಿತಿಗಾಗಿ ಶ್ರಮಿಸಿದ ಇವರು ಮಾನವ ಜನಾಂಗದ ಗುರು ಆಗಿದ್ದಾರೆ. ಅವರು ಅನೇಕ ಸಮಾಜ ಮುಖಿ ಸುಧಾರಣೆಗಾಗಿ ಶ್ರಮಿಸಿದ್ದಾರೆ ಎಂದರು.

ನಾರಾಯಣ ಗುರುಗಳು ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದು, ಎಲ್ಲರಿಗೂ ಆದರ್ಶಪ್ರಾಯರಾದ ಸಮಾಜ ಸುಧಾರಕರಾಗಿದ್ದರು. ಸಮಾಜದ ಒಳಿತಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಮಹನೀಯರ ಆದರ್ಶ ಜೀವನ ಚರಿತೆಯನು ನಾವು ಅರಿಯಬೇಕಾಗಿದೆ. ಬ್ರಹ್ಮಶ್ರೀ ನಾರಾಯಣ ಗುರಗಳವರ ತತ್ವಾದರ್ಶಗಳು, ಚಿಂತನೆಗಳನ್ನು ಮುಂದಿನ ಯುವ ಪೀಳಿಗೆಗೆ ತಲುಪಿಸಬೇಕಾಗಿದೆ ಅವರ ತತ್ವಾದರ್ಶದಲ್ಲಿ ನಡೆದು ಸಶಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸೋಣ ಎಂದು ಅವರು ಹೇಳಿದರು.

ಡಾ.ಎಂ.ಎಸ್.ಮಾಗಣಗೇರಿ ಅವರು ವಿಶೇಷ ಉಪನ್ಯಾಸ ನೀಡಿ, ಬ್ರಹ್ಮಶ್ರೀ ನಾರಾಯಣಗುರುಗಳು ಅಸಮಾನತೆ ಹಾಗೂ ಶೋಷಣೆ ವಿರುದ್ಧ ಹೋರಾಡಿ, ಎಲ್ಲರೂ ಪರಸ್ಪರ ಗೌರವಿಸುವಂತಹ ಸಮ ಸಮಾಜದ ನಿರ್ಮಾಣಕ್ಕೆ ಒತ್ತು ನೀಡಿದವರು ಶಿಕ್ಷಣದ ಮಹತ್ವದ ಕುರಿತು ತಿಳಿಸಿದ್ದಾರೆ ಎಂದು ಹೇಳಿದರು.

ಬ್ರಹ್ಮಶ್ರೀ ನಾರಾಯಣಗುರುಗಳು ಅದ್ದೂರಿ ವಿವಾಹ, ಮಹಿಳೆಯರ ಶೋಷಣೆಗಳ, ಸಮಾಜದಲ್ಲಿನ ಮೌಡ್ಯತೆಗಳಂತಹ ಅನಿಷ್ಟ ಪದ್ಧತಿ ವಿರೋಧಿಸಿ ಅವುಗಳನ್ನು ತೊಡೆದು ಹಾಕಲು ಶಿಕ್ಷಣದಿಂದಲೇ ಸಾಧ್ಯ ಎಂದು ಪ್ರತಿಪಾದಿಸಿದ ಅವರ ಚಿಂತನೆ ಅರಿಯಬೇಕು ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ ಸ್ವಾಗತಿಸಿದರು.ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಾದ ಚಂದ್ರಕಾAತ ಕುಂಬಾರ ವಂದಿಸಿದ್ದರು. ಈ ಸಂದರ್ಭದಲ್ಲಿ ಡಿವೈಎಸ್‌ಪಿ ಎಂ.ಎ.ಉಪಾಸೆ, ಬಸವರಾಜ ಈಳಿಗೇರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಮೆರವಣಿಗೆಗೆ ಚಾಲನೆ: ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿ ಅಂಗವಾಗಿ ನಗರದ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಅವರ ಭಾವಚಿತ್ರದ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು ಅವರು ಚಾಲನೆ ನೀಡಿದರು. ಮೆರವಣಿಗೆಯೂ ಕಲಾಮೇಳ ಹಾಗೂ ಕಲಾ ತಂಡಗಳೊ0ದಿಗೆ ಗಾಂಧಿ ಚೌಕ್, ಬಸವೇಶ್ವರ ವೃತ್ತ, ಅಂಬೇಡ್ಕರ ವೃತ್ತ ಮಾರ್ಗವಾಗಿ ಕಂದಗಲ್ ಹನುಮಂತರಾಯ ರಂಗಮಂದಿರ ತಲುಪಿ, ಸಮಾವೇಶಗೊಂಡಿತು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande