
ಬೆಂಗಳೂರು, 10 ಜನವರಿ (ಹಿ.ಸ.) :
ಆ್ಯಂಕರ್ : ಪಕ್ಷ ಸಂಘಟನೆಯ ಬಲವರ್ಧನೆ ನಿಟ್ಟಿನಲ್ಲಿ ಬಿಜೆಪಿ ನಡೆಸುತ್ತಿರುವ ಜಿಲ್ಲಾವಾರು ವಿಶೇಷ ಸಭೆಯಲ್ಲಿ ಇಂದು ಚಿತ್ರದುರ್ಗ, ಬಳ್ಳಾರಿ ಮತ್ತು ಶಿವಮೊಗ್ಗ ಜಿಲ್ಲೆಗಳ ಪದಾಧಿಕಾರಿಗಳೊಂದಿಗೆ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಸ್ತೃತ ಸಮಾಲೋಚನೆ ನಡೆಸಿದರು.
ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ನಿಷ್ಠೆ, ಉತ್ಸಾಹ ಹಾಗೂ ಸಕ್ರಿಯತೆಗಳೆ ಪಕ್ಷದ ಶಕ್ತಿ. ತಳಮಟ್ಟದಿಂದ ಪಕ್ಷವನ್ನು ಮತ್ತಷ್ಟು ಸಂಘಟಿಸಿ, ಜನಸೇವೆಯ ಸಂಕಲ್ಪದೊಂದಿಗೆ ನಾವೆಲ್ಲರೂ ಒಂದಾಗಿ ಮುನ್ನಡೆಯುತ್ತಿದ್ದೇವೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa