
ಹುಬ್ಬಳ್ಳಿ, 10 ಜನವರಿ (ಹಿ.ಸ.) :
ಆ್ಯಂಕರ್ : ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ವತಿಯಿಂದ ಸ್ವಚ್ಛ ಭಾರತ ಮಿಷನ್ 2.0 ಯೋಜನೆಯಡಿ ನಾಗರಿಕರಲ್ಲಿ ಸ್ವಚ್ಛತಾ ಅರಿವು ಮೂಡಿಸುವ ಉದ್ದೇಶದಿಂದ ವಿಶೇಷ ಜಾಗೃತಿ ಓಟ (ಮ್ಯಾರಥಾನ್ ಹಾಗೂ ಸೈಕ್ಲೋಥಾನ್) ಅನ್ನು ಹಮ್ಮಿಕೊಳ್ಳಲಾಗಿದೆ.
ಈ ಜಾಗೃತಿ ಕಾರ್ಯಕ್ರಮವು ನಾಳೆ 11 ರಂದು ಬೆಳಿಗ್ಗೆ 7:00 ಗಂಟೆಗೆ ಆರಂಭವಾಗಲಿದ್ದು, ತೋಳನ ಕೆರೆಯಿಂದ ಉಣಕಲ್ ಕೆರೆಯವರೆಗೆ ನಡೆಯಲಿದೆ.
ನಗರದ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಚ್ಛತಾ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಮಹಾನಗರ ಪಾಲಿಕೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಮನವಿ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa