
ಧಾರವಾಡ, 12 ಜನವರಿ (ಹಿ.ಸ.) :
ಆ್ಯಂಕರ್ : ಜನವರಿ 26 ರಂದು ಜರುಗುವ ಗಣರಾಜ್ಯೋತ್ಸವವನ್ನು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದ್ದು, ಕೇವಲ ಧ್ವಜಾರೋಹಣಕ್ಕೆ ಸೀಮಿತವಾಗದೆ, ಸಂವಿಧಾನದ ಆಶಯಗಳನ್ನು ಸಾರುವ ನಿಟ್ಟಿನಲ್ಲಿ ಈ ಬಾರಿ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ಮೂಡಿಬರಬೇಕು. ಪೋಲಿಸ್, ಶಿಕ್ಷಣ ಹಾಗೂ ಇತರ ಇಲಾಖೆಗಳು ತಮಗೆ ವಹಿಸಿದ ಕಾರ್ಯಗಳನ್ನು ನಿರ್ವಹಿಸಬೇಕೆಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನವರಿ 26 ರ ಗಣರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ನಗರದ ಪ್ರಮುಖ ವೃತ್ತಗಳು ಮತ್ತು ಸರ್ಕಾರಿ ಕಟ್ಟಡಗಳನ್ನು ದೀಪಾಲಂಕಾರದಿಂದ ಅಲಂಕರಿಸುವುದು ಹಾಗೂ ಸ್ವಚ್ಛತೆಯನ್ನು ಕಾಪಾಡುವುದು ಮುಖ್ಯವಾಗಿದೆ ಎಂದು ತಿಳಿಸಿದರು.
ಗಣರಾಜ್ಯೋತ್ಸವವು ರಾಷ್ಟ್ರೀಯ ಹಬ್ಬವಾಗಿದ್ದು, ಇದರಲ್ಲಿ ಯಾವುದೇ ರೀತಿಯ ಲೋಪದೋಷಗಳಿಗೆ ಅವಕಾಶ ನೀಡಬಾರದು. ಮುಂಜಾಗೃತ ಕ್ರಮವಾಗಿ ಆಚರಣೆಯ ರೂಪುರೇಷೆಗಳ ಬಗ್ಗೆ ಅಧಿಕಾರಿಗಳು ಗಮನವಹಿಸಬೇಕು ಎಂದು ಅವರು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa